ಎಸ್‌.ಆರ್‌. ಪಾಟೀಲ ಸೇರಿದಂತೆ 12 ಸಾಧಕರಿಗೆ ಅವ್ವ ಪ್ರಶಸ್ತಿ

KannadaprabhaNewsNetwork |  
Published : Dec 09, 2024, 12:48 AM IST
ಅವ್ವ ಪ್ರಶಸ್ತಿ | Kannada Prabha

ಸಾರಾಂಶ

ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ಅವ್ವ ಸೇವಾ ಟ್ರಸ್ಟ್‌ ವತಿಯಿಂದ ಡಿ. 15ರಂದು ಬೆಳಗ್ಗೆ 10.30ಕ್ಕೆ 12 ಸಾಧಕರಿಗೆ ಅವ್ವ ಪ್ರಶಸ್ತಿ-2024 ಪ್ರದಾನ

ಹುಬ್ಬಳ್ಳಿ: ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯ​ಸ್ಮ​ರ​ಣೆ ಅಂಗವಾಗಿ ಅವ್ವ ಸೇವಾ ಟ್ರಸ್ಟ್‌ ವತಿಯಿಂದ ಡಿ. 15ರಂದು ಬೆಳಗ್ಗೆ 10.30ಕ್ಕೆ 12 ಸಾ​ಧ​ಕ​ರಿಗೆ ಅವ್ವ ಪ್ರಶಸ್ತಿ-2024 ಪ್ರದಾನ ಮಾಡಲಾಗುವುದು. ಇಲ್ಲಿನ ದೇಶಪಾಂಡೆ ನಗರದ ಗುಜರಾತ್‌ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್‌ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನ​ಗ​ರದಲ್ಲಿ ಭಾ​ನು​ವಾರ ಸು​ದ್ದಿ​ಗೋ​ಷ್ಠಿ​ಯಲ್ಲಿ ಮಾ​ತ​ನಾ​ಡಿದ ಅ​ವ​ರು, ಈ ಬಾ​ರಿಯ ಪ್ರ​ಶ​ಸ್ತಿಗೆ ವಿ​ವಿಧ ಕ್ಷೇ​ತ್ರಗಳಲ್ಲಿ ಸಾ​ಧನೆ ಮಾ​ಡಿದ ಒಟ್ಟು 12 ಸಾ​ಧ​ಕ​ರನ್ನು ಆಯ್ಕೆ ಮಾ​ಡ​ಲಾ​ಗಿ​ದೆ ಎಂದ​ರು.

ಹಿ​ರಿಯ ರಾ​ಜ​ಕಾ​ರಣಿ ಎ​ಸ್‌.​ಆ​ರ್‌. ​ಪಾ​ಟೀಲ, ಪ​ತ್ರ​ಕರ್ತ ಚಂದ್ರ​ಕಾಂತ ವಡ್ಡು, ಸಿ​ತಾರ ವಾ​ದಕ ಛೋಟೆ ರ​ಹ​ಮತ್‌ ಖಾ​ನ್‌, ಸಾಹಿತಿ ಸಂಗಮನಾಥ ಲೋಕಾಪುರ, ಗಾಯಕಿ ರೇಖಾ ಹೆಗಡೆ, ಭಾಗವತ ಕೇಶವ ಹೆಗಡೆ ಕೊಳಗಿ, ಉದ್ಯಮಿ ಮಹೇಂದ್ರ ಸಿಂಘಿ, ಬಸವ ತತ್ವ ಪ್ರಚಾರಕ ಎಸ್‌. ಮಹದೇವಯ್ಯ, ಸಮಾಜ ಸೇವಕಿ ರಾಜೇಶ್ವರಿ ಪಾಟೀಲ, ಜಾ​ನಪದ ಕಲಾವಿದ ಬಸವರಾಜ ಶಿಗ್ಗಾಂವಿ, ಸ್ಕೇ​ಟಿಂಗ್‌ ಕ್ರೀ​ಡಾ​ಪಟು ತ್ರಿಶಾ ಜಡಲಾ ಹಾಗೂ ಎಸ್ಸೆ​ಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಬಾಗಲಕೋಟೆಯ ಅಂಕಿತಾ ಕೊಣ್ಣೂರ ಅವ್ವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಬಾರಿ ಸ್ಮರಣಿಕೆ ಜತೆಗೆ ₹25 ಸಾವಿರ ನಗದು ಬ​ಹು​ಮಾನ ನೀಡಲಾಗುತ್ತಿದೆ ಎಂದು ನುಡಿದರು.

ಇ​ಳ​ಕಲ್‌ ಚಿತ್ತರಗಿಯ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವ​ಹಿ​ಸುವರು. ಡಿ​ಸಿಎಂ ಡಿ.ಕೆ. ಶಿವಕುಮಾರ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶಸ್ತಿ ಪ್ರದಾನ ಮಾಡುವರು. ಉಪನ್ಯಾಸಕಿ ಅಕ್ಷಯಾ ಗೋಖಲೆ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದ​ರು.

ಸಾ​ಧ​ಕರ ಬಗ್ಗೆ ವಿವಿಧ ಪತ್ರಿಕೆಗಳಲ್ಲಿ ಪ್ರ​ಕ​ಟ​ಗೊಂಡ ವರದಿ, ಮಾಹಿತಿ ಹಾಗೂ ಸಮಾಜದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದಕ್ಕೊಂದು ಪ್ರತ್ಯೇಕ ಸಮಿತಿ ರಚಿಸಿದ್ದೇವೆ. ಇ​ಲ್ಲಿ​ಯ​ವ​ರೆಗೆ ಅವ್ವ ಸೇವಾ ಟ್ರಸ್ಟ್‌ ವ​ತಿ​ಯಿಂದ 68 ಸಾ​ಧ​ಕ​ರಿಗೆ ಅವ್ವ ಪ್ರ​ಶಸ್ತಿ ಪ್ರ​ದಾನ ಮಾ​ಡ​ಲಾ​ಗಿದೆ ಎಂದ​ರು.

ಸು​ದ್ದಿ​ಗೋ​ಷ್ಠಿ​ಯಲ್ಲಿ ಟ್ರಸ್ಟ್‌ ಕಾ​ರ್ಯ​ದರ್ಶಿ ಶಶಿ ಸಾಲಿ, ಸ​ಹ​ಕಾ​ರ್ಯ​ದ​ರ್ಶಿ ಶ್ರೀಪಾದ ರಾಣೆ, ವೆಂಕಟೇಶ ಬದ್ದಿ, ರಾಜು ದೇವರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ