ರತ್ನಾಕರ ಕುನಗೋಡು ಅವರ ಕವನ ಸಂಕಲನಕ್ಕೆ ಪ್ರಶಸ್ತಿ

KannadaprabhaNewsNetwork |  
Published : Jun 10, 2025, 02:43 AM IST
ರತ್ನಾಕರ ಸಿ.ಕುನಗೋಡು | Kannada Prabha

ಸಾರಾಂಶ

ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ರತ್ನಾಕರ ಸಿ.ಕುನಗೋಡು ಅವರ "ಎದೆ ನೆಲದ ಕಾವು " ಕವನ ಸಂಕಲನಕ್ಕೆ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ನೀಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭ್ಯವಾಗಿದೆ.

ಸಾಗರ: ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ರತ್ನಾಕರ ಸಿ.ಕುನಗೋಡು ಅವರ "ಎದೆ ನೆಲದ ಕಾವು " ಕವನ ಸಂಕಲನಕ್ಕೆ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ನೀಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭ್ಯವಾಗಿದೆ. ರಾಯಚೂರಿನಲ್ಲಿ ಜೂ.೨೮, ೨೯ರಂದು ನಡೆಯಲಿರುವ ೧೧ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ರತ್ನಾಕರ ಅವರಿಗೆ ಈಗಾಗಲೇ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ, ಸಹೃದಯ ಕಾವ್ಯ ಪ್ರಶಸ್ತಿ, ಸು.ರಂ.ಎಕ್ಕುಂಡಿ ಶತಮಾನೋತ್ಸವ ಕಾವ್ಯ ಪ್ರಶಸ್ತಿ ಲಭ್ಯವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?