ಕಟ್ಟೆಮಾಡುವಿನ ಬ್ಲ್ಯಾಕ್‌ ಈಗಲ್‌ ತಂಡಕ್ಕೆ ಪ್ರಶಸ್ತಿ

KannadaprabhaNewsNetwork |  
Published : Nov 19, 2024, 12:47 AM IST
18-ಎನ್ ಪಿ ಕೆ-2.ಬಲ್ಲಮಾವಟಿಯ ಭಜರಂಗಿ ಯೂಥ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬ್ಯಾಕ್ಈಗಲ್ಸ್ ತಂಡ ಮುಡಿಗೇರಿಸಿಕೊಂಡಿತು.18-ಎನ್ ಪಿ ಕೆ-3. | Kannada Prabha

ಸಾರಾಂಶ

ಮೂರನೇ ವರ್ಷದ ಮುಕ್ತ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಪಂದ್ಯಾಟದಲ್ಲಿ ಕಟ್ಟೆಮಾಡುವಿನ ಬ್ಲ್ಯಾಕ್‌ ಈಗಲ್ಸ್‌ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಮೂರ್ನಾಡಿನ ಎನ್‌ಸಿಡಿ ತಂಡ ರನ್ನರ್‌ ಅಪ್‌ ಸ್ಥಾನ ಪಡೆಯಿತು.

ದುಗ್ಗಳ ಸದಾನಂದ ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ಬಲ್ಲಮಾವಟಿಯ ಭಜರಂಗಿ ಯೂಥ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬ್ಲ್ಯಾಕ್‌ ಈಗಲ್ಸ್ ತಂಡ ಮುಡಿಗೇರಿಸಿಕೊಂಡಿತು.

ಮೂರ್ನಾಡಿನ ಎನ್ ಸಿ ಡಿ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ಅಂತಿಮ ಪಂದ್ಯದಲ್ಲಿ ಎಂಎಸ್ ಡಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ ಎಂಟು ಓವರ್ ಗಳಲ್ಲಿ 42 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಬ್ಲ್ಯಾಕ್ ಈಗಲ್ಸ್ ತಂಡ 6.5 ನಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ತಂಡಕ್ಕೆ ರಾಟೆ ದೇವಸ್ಥಾನದ ಅಪ್ಪಣ್ಣ ಪ್ರಾಯೋಜಿಸಿದ ಟ್ರೋಫಿ ಹಾಗೂ 33, 333 ರು. ನಗದು ಬಹುಮಾನಗಳನ್ನು ವಿತರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ಎಡಿಕೇರಿ ಜಗನ್ನಾಥ್ ಪ್ರಾಯೋಜಿಸಿದ ಟ್ರೋಫಿ ಹಾಗೂ 22, 222 ರು. ನಗದು ನೀಡಿ ಪುರಸ್ಕರಿಸಲಾಯಿತು.

ಭಜರಂಗಿ ಯೂತ್ ಕ್ಲಬ್ ಅಧ್ಯಕ್ಷ ಎಡಿಕೇರಿ ಪ್ರಸನ್ನ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನೇತಾಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ ದೇಶದಲ್ಲಿ ಕ್ರಿಕೆಟ್ ಶಿಸ್ತಿನ ಆಟವಾಗಿದೆ. ಭಜರಂಗಿ ಯುವಕ ಸಂಘದ ಪದಾಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಶಿಸ್ತಿನಿಂದ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ. ಇಂತಹ ಕ್ರೀಡಾಕೂಟದಿಂದ ಗ್ರಾಮೀಣ ಜನರಿಗೆ ಉತ್ತಮ ಮನೋರಂಜನೆ ಸಿಕ್ಕಿದೆ ಎಂದರು.

ನಾಪೋಕ್ಲು ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ ಮಾತನಾಡಿದರು. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಬಿ ಭೀಮಯ್ಯ, ಸಮಾಜ ಸೇವಕ ಚೀಯಂಡಿರ ದಿನೇಶ್, ಮುಖ್ಯ ಶಿಕ್ಷಕ ಸಿಎಸ್ ಸುರೇಶ್ , ಭಜರಂಗಿ ಯೂತ್ ಕ್ಲಬ್ ಉಪಾಧ್ಯಕ್ಷ ಚಂದ್ರಕಾಂತ ವಿನು, ಕಾರ್ಯದರ್ಶಿ ರಾಜೇಶ್, ಖಜಾಂಚಿ ಕೋಟೇರ ನೂತನ್, ಸಹಕಾರ್ಯದರ್ಶಿ ಮನೋಜ್ ಇತರ ಪದಾಧಿಕಾರಿಗಳು ಇದ್ದರು.

ಮೂರು ದಿನ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಭಾಗವಹಿಸಿದ ಕ್ರೀಡಾ ಪ್ರೇಮಿಗಳಿಗೆ ಭಜರಂಗಿ ಯೂತ್‌ ಕ್ಲಬ್ ವತಿಯಿಂದ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಮ್ಯಾನ್ ಆಫ್ ದಿ ಮ್ಯಾಚ್ –ಇಚ್ಚು, ಬ್ಲ್ಯಾಕ್ ಈಗಲ್ ತಂಡ, ಮ್ಯಾನ್ ಆಫ್ ದಿ ಸೀರೀಸ್-ಶಿವು ಎಂ ಎಸ್ ಡಿ ಮೂರ್ನಾಡು ತಂಡ, ಉತ್ತಮ ಬ್ಯಾಟ್ಸ್ ಮನ್ – ರಜಾಕ್ , ಬ್ಲ್ಯಾಕ್ ಈಗಲ್ ತಂಡ, ಉತ್ತಮ ಬೌಲರ್ - ಇಚ್ಚು, ಬ್ಲ್ಯಾಕ್‌ ಈಗಲ್ ತಂಡ

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ