ನೆಲದನಿ ಬಳಗಕ್ಕೆ ‘ಅತ್ಯುತ್ತಮ ಯುವ ಸಂಘ’ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Mar 01, 2024, 02:18 AM IST
29ಕೆಎಂಎನ್‌ಡಿ-5ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ತಾಲ್ಲೂಕಿನ ಮಂಗಲ ಗ್ರಾಮದ ನೆಲದನಿ ಬಳಗಕ್ಕೆ ನೆಹರು ಯುವ ಕೇಂದ್ರ ನೀಡುವ 2021-22ನೇ ಸಾಲಿನ ಅತ್ಯುತ್ತಮ ಯುವ ಸಂಘ ಪ್ರಶಸ್ತಿಯನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಪ್ರದಾನ ಮಾಡಿದರು. | Kannada Prabha

ಸಾರಾಂಶ

ಮಂಡ್ಯ ತಾಲೂಕಿನ ಮಂಗಲ ಗ್ರಾಮದ ನೆಲದನಿ ಬಳಗಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ ನೀಡುವ 2021-22ನೇ ಸಾಲಿನ ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಪ್ರದಾನ. ಬಳಗದ ಪರವಾಗಿ ಪ್ರಶಸ್ತಿಯನ್ನು ಅನಿತಾ ಎನ್.ಹರೀಶ್ ಮತ್ತು ಪವಿತ್ರ ಆರ್.ಸತೀಶ್ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ ನೀಡುವ 2021-22ನೇ ಸಾಲಿನ ಅತ್ಯುತ್ತಮ ಯುವ ಸಂಘ ಪ್ರಶಸ್ತಿಯನ್ನು ಮಂಡ್ಯ ತಾಲೂಕಿನ ಮಂಗಲ ಗ್ರಾಮದ ನೆಲದನಿ ಬಳಗಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರದಾನ ಮಾಡಿದರು.

ಮಂಡ್ಯನಗರ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಬಳಗದ ಪರವಾಗಿ ಪ್ರಶಸ್ತಿಯನ್ನು ಅನಿತಾ ಎನ್.ಹರೀಶ್ ಮತ್ತು ಪವಿತ್ರ ಆರ್.ಸತೀಶ್ ಸ್ವೀಕರಿಸಿದರು.

ನೆಲದನಿ ಬಳಗವು ದಶಕದಿಂದಲೂ ಮಂಡ್ಯ ಜಿಲ್ಲೆಯಾದ್ಯಂತ ಸಮಾಜಮುಖಿ ಸೇವೆ ಮಾಡುತ್ತಾ ಬಂದಿದೆ. ರಕ್ತದಾನ ಶಿಬಿರ, ಕಲೆ, ಸಾಹಿತ್ಯ, ರಂಗ ಚಟುವಟಿಕೆ, ಗ್ರಾಮೀಣ ಕ್ರೀಡಾಕೂಟ ರಾಜ್ಯಮಟ್ಟದಲ್ಲಿ ಮನ್ನಣೆ ಪಡೆದಿದೆ, ನಾಟಿ ಕೋಳಿ- ರಾಗಿಮುದ್ದೆ ಉಣ್ಣುವ ಸ್ಪರ್ಧೆ ಗಮನ ಸೆಳೆದಿದೆ. ಸತಿ-ಪತಿ, ಕುಟುಂಬ ಸಮೇತ ರಕ್ತದಾನ ಮಾಡುತ್ತಾ ರಕ್ತದಾನಕ್ಕೆ ಬಳಗದ ಸದಸ್ಯರು ಜಾಗೃತಿ ಮೂಡಿಸುತ್ತಿದೆ. ಸಸಿಗಳ ವಿತರಣೆ ಸೇರಿದಂತೆ ಪರಿಸರ ಜಾಗೃತಿ ಮೂಡಿಸುತ್ತಿದೆ.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಪ್ರಾದೇಶಿಕ ಎನ್.ವೈ.ಕೆ ಅಧಿಕಾರಿ ಎಂ.ಎನ್. ನಟರಾಜು, ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ಕೆ.ರಾಜೇಶ್ ಕಾರಂತ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಓಂ ಪ್ರಕಾಶ್, ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲರಾದ ಹೇಮಾಲತಾ, ಡಾ.ಕೆಂಪಮ್ಮ, ನೆಲದನಿ ಬಳಗದ ಅಧ್ಯಕ್ಷ ಲಂಕೇಶ್ ಮಂಗಲ, ಉಪಾಧ್ಯಕ್ಷ ಪ್ರತಾಪ್, ಸುನೀತಾ, ಮುಖಂಡರಾದ ಕುಮಾರ್ ಗೌಡ ಎಂ.ಸಿ, ಮಹದೇವಸ್ವಾಮಿ, ಶಿವಮಲ್ಲು, ರಕ್ಷಿತ್ ರಾಜ್, ಬಿ.ರಾಜ್, ಟಿ.ಡಿ.ನಾಗರಾಜು, ಬೇಲೂರು ಸೋಮಶೇಖರ್ ಹಾಗೂ ಕೆ.ಪಿ.ಅರುಣಕುಮಾರಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ನಷ್ಟ: ಶರ್ಮಾ
ಆಟೋ ಗ್ಲಾಸ್ ಒಡೆದಿದ್ದಕ್ಕೆಸ್ನೇಹಿತನ ಕೊಂದ ಚಾಲಕ