ಕನ್ನಡಪ್ರಭವಾರ್ತೆ ಮದ್ದೂರು
ಪಟ್ಟಣದ ಪುರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಅಧ್ಯಕ್ಷೆ ಕೋಕಿಲ ಅರುಣ್ ಅಧ್ಯಕ್ಷತೆಯಲ್ಲಿ ನಡೆದ ನಮೂನೆ ಮೂರು ಹಾಗೂ ನಮೂನೆ ಮೂರು ಎ ಅನ್ವಯ ಪ್ರತಿ ವಾರ್ಡ್ ಗಳ ಸದಸ್ಯರ ಅಧ್ಯಕ್ಷತೆಯಲ್ಲಿ ಆಸ್ತಿಗಳ ಮಾಲೀಕರಿಗೆ ಅಗತ್ಯ ದಾಖಲಾತಿಗಳನ್ನು ನೀಡಿ ಇ ಸ್ವತ್ತು ಮಾಡಿಸಿಕೊಳ್ಳುವಂತೆ ಅರಿವು ಮೂಡಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಸರ್ಕಾರದ ಆದೇಶದಂತೆ ತೆರಿಗೆ ಪಾವತಿಸಿ ಬಿ, ಖಾತೆ ರೀತಿ ಈ ಸ್ವತ್ತು ಮಾಡಿಸಿಕೊಂಡ ಆಸ್ತಿಗಳ ಮಾಲೀಕರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಸದಸ್ಯ ಮನೋಜ್ ದೂರಿದರು. ಬಿ, ಖಾತ ನೋಂದಣಿ ಆದ ನಂತರ ವಾರ್ಡ್ ಗಳ ಸ್ವಚ್ಛತೆ ಕಾಪಾಡಬೇಕು. ಅಲ್ಲಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು. ಈ ಪ್ರಕ್ರಿಯೆ ನಿಮ್ಮಿಂದ ಸಾಧ್ಯವೇ ಎಂದು ಪ್ರಶ್ನಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧ್ಯಕ್ಷೆ ಕೋಕಿಲ, ಪ್ರಾರಂಭಿಕ ಹಂತದಲ್ಲಿ ಸಾಧ್ಯವಾಗ ಇದ್ದರೂ ಸಹ ನಂತರ ದಿನಗಳಲ್ಲಿ ವಾರ್ಡ್ ಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಅಂತಿಮವಾಗಿ ಈ ಮತ್ತು ಬಿ ಖಾತಾ ಬಗ್ಗೆ ಸಭೆಯಲ್ಲಿ ಪರ ಮತ್ತು ವಿರೋಧದ ಬಗ್ಗೆ ಚರ್ಚೆ ನಡೆದು ಸರ್ಕಾರದ ಸುತ್ತೋಲೆ ಅನ್ವಯ ಅಗತ್ಯ ದಾಖಲಾತಿಗಳನ್ನು ಪಡೆದುಕೊಂಡು ಖಾತೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್, ಸದಸ್ಯರಾದ ಮಹೇಶ, ಸುರೇಶ್ ಕುಮಾರ್, ಎಂ.ಐ.ಪ್ರವೀಣ್ , ಲತಾ ರಾಮು ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.