ಮಾನವ ಕಳ್ಳಸಾಗಾಣಿಕೆ ಕುರಿತು ಜಾಗೃತಿ ಅವಶ್ಯ: ಸಿ.ಎಸ್. ಶಿವನಗೌಡ್ರ

KannadaprabhaNewsNetwork |  
Published : Aug 07, 2026, 02:45 AM IST
ಗದಗದಲ್ಲಿ ಗುರುವಾರ ವಿಶ್ವ ಮಾನವ ಕಳ್ಳಸಾಗಾಣಿಕೆ ವಿರೋಧ ದಿನಾಚರಣೆ ಕಾರ್ಯಕ್ರಮವನ್ನು ಸಿ.ಎಸ್. ಶಿವನಗೌಡ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳ ಕಳ್ಳತನ ಮಾಡಿ ಮಗುವಿಗೆ ದಬ್ಬಾಳಿಕೆ ಮಾಡಿ ಭಿಕ್ಷಾಟನೆ, ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಇತರ ದುಷ್ಕೃತ್ಯಗಳಿಗೆ ಉಪಯೋಗಿಸುತ್ತಿದ್ದಾರೆ.

ಗದಗ: ಮಕ್ಕಳನ್ನು ಮಾರಾಟ ಮಾಡುವುದು ಗಂಭೀರ ಸ್ವರೂಪದ ವಿಷಯವಾಗಿದ್ದು, ಮಾನವ ಕಳ್ಳಸಾಗಾಣಿಕೆ ಕುರಿತು ಜಾಗೃತಿ ಅವಶ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹೇಳಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಪಂ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ವಿಶ್ವ ಮಾನವ ಕಳ್ಳಸಾಗಾಣಿಕೆ ವಿರೋಧ ದಿನಾಚರಣೆ-2026 ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಕಳ್ಳತನ ಮಾಡಿ ಮಗುವಿಗೆ ದಬ್ಬಾಳಿಕೆ ಮಾಡಿ ಭಿಕ್ಷಾಟನೆ, ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಇತರ ದುಷ್ಕೃತ್ಯಗಳಿಗೆ ಉಪಯೋಗಿಸುತ್ತಿದ್ದಾರೆ. ಮಾನವ ಕಳ್ಳಸಾಗಾಣಿಕೆ ಎನ್ನುವುದು ಆಧುನಿಕ ಸಮಾಜವನ್ನು ಕಾಡುತ್ತಿರುವ ಅತ್ಯಂತ ಕ್ರೂರ ಮತ್ತು ಅಮಾನವೀಯ ಅಪರಾಧವಾಗಿದೆ. ಈ ಪಿಡುಗನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅತ್ಯಾವಶ್ಯಕವಾಗಿದೆ ಎಂದರು.

ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಮುರ್ತುಜಾ ಖಾದ್ರಿ ಮಾತನಾಡಿ, ಈಗಿನ ಕಾಲಮಾನದಲ್ಲಿ ಸೈಬರ್‌ ಪ್ರಕರಣಗಳು ಹೆಚ್ಚುತ್ತಿವೆ. ಈ ಸಾರ್ವಜನಿಕರಲ್ಲಿ ಅರಿವು ಇರಬೇಕು ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯದೇವಿ ಕವಲೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧಾ ಜಿ. ಮಣ್ಣೂರು ಮಾತನಾಡಿದರು. ವೃತ್ತ ಪೊಲೀಸ್ ನಿರೀಕ್ಷಕರಾದ ಎಲ್.ಕೆ. ಜೂಲಕಟ್ಟಿ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಎಸ್.ಎಸ್. ಪಟ್ಟಣಶೆಟ್ಟರ, ಪ್ರಾಂಶುಪಾಲ ವೈ.ಎಸ್. ಮತ್ತೂರು ಇದ್ದರು. ಜಯಶ್ರೀ ಆರ್. ಸ್ವಾಗತಿಸಿದರು. ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿದರು. ರಮೇಶ ಕಳ್ಳಿಮನಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲ್ಮಾಡಿ ಚರ್ಚ್ ವಾರ್ಷಿಕೋತ್ಸವ: ನೊವೆನಾ ಪ್ರಾರ್ಥನೆಗೆ ಚಾಲನೆ
ಪಿಂಚಣಿ ರದ್ದು, ವಿಧಾನಸಭೆಯಲ್ಲಿ ಪ್ರಸ್ತಾಪ: ಯಶ್‌ಪಾಲ್ ಸುವರ್ಣ