ಮಲೇರಿಯಾ ರೋಗ ವ್ಯಾಪಿಸದಂತೆ ಜಾಗೃತಿ

KannadaprabhaNewsNetwork |  
Published : Jun 24, 2024, 01:34 AM IST
ಪೋಟೋ೨೩ಸಿಎಲ್‌ಕೆ೩ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಮಲೇರಿಯಾ ವಿರೋಧಿ ದಿನಾಚರಣೆ ಜಾಗೃತಿ ಜಾಥಕ್ಕೆ ವೈದ್ಯಾಧಿಕಾರಿ ಡಾ.ಬಿಂದುಶ್ರೀ ಚಾಲನೆ ನೀಡಿದರು. | Kannada Prabha

ಸಾರಾಂಶ

ಮಲೇರಿಯಾ ರೋಗ ಹರಡದಂತೆ ಜಾಗ್ರತೆ ವಹಿಸಲು, ಸಾರ್ವಜನಿಕರು ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಗೋಪನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿಂದುಶ್ರೀ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಮಲೇರಿಯಾ ವಿರೋಧಿ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

- ಗ್ರಾಮಸ್ಥರಿಗೆ ಆರೋಗ್ಯ ಇಲಾಖೆಯಿಂದ ಸಲಹೆ ಸೂಚನೆ

ಕನ್ನಡಪ್ರಭವಾರ್ತೆ ಚಳ್ಳಕೆರೆ

ಮಲೇರಿಯಾ ರೋಗ ಹರಡದಂತೆ ಜಾಗ್ರತೆ ವಹಿಸಲು, ಸಾರ್ವಜನಿಕರು ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಗೋಪನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿಂದುಶ್ರೀ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಮಲೇರಿಯಾ ವಿರೋಧಿ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಸ್ಪತ್ರೆ ಸಿಬ್ಬಂದಿ ವರ್ಗ, ಆಶಾ, ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಗಳಿಗೆ ತೆರಳಿ ಮಲೇರಿಯಾ ಹರಡುವ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಗ್ರಾಮೀಣ ಭಾಗಗಳಲ್ಲಿ ಸ್ವಚ್ಚತೆ ಒಂದು ಸಾವಾಲಾಗಿದೆ. ಸ್ವಚ್ಚತೆಯನ್ನು ನಿರ್ಲಕ್ಷಿಸಿದರೆ ಯಾವುದೇ ಕ್ಷಣದಲ್ಲಾದರೂ ನಾವು ರೋಗಕ್ಕೆ ತುತ್ತಾಗುತ್ತೇವೆ ಎಂದು ಸಲಹೆ ಎಚ್ಚರಿಕೆ ನೀಡಿದರು.

ತಾಲೂಕು ಮಲೇರಿಯಾ ನೋಡಲ್ ಲ್ಯಾಬ್ ಅಧಿಕಾರಿ ಎಚ್.ತಿಪ್ಪೇಸ್ವಾಮಿ ಮಾತನಾಡಿ ರಸ್ತೆ, ತಗ್ಗುಗುಂಡಿಗಳಲ್ಲಿ ನಿಂತ ಕೊಳಚೆ ನೀರಿನೊಳಗೆ ಸೊಳ್ಳೆಗಳು ವಾಸ ಮಾಡುವುದೇ ಮಲೇರಿಯಾಗೆ ಮುಖ್ಯ ಕಾರಣವಾಗಿದೆ. ನಮ್ಮ ನಮ್ಮ ಸುತ್ತಮುತ್ತಲ ವಾತಾವರಣದ ಸ್ವಚ್ಚತೆ ಕಾಪಾಡಿದರೆ ಸಾಕು. ಮಳೇರಿಯಾವನ್ನು ತಡೆಯಬಹುದು. ಆರೋಗ್ಯ ಇಲಾಖೆ ನಿರಂತರವಾಗಿ ಮಲೇರಿಯಾ ಸೇರಿದದಂತೆ ಹಲವಾರು ಮಾರಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ ಎಂದರು.

ಆಸ್ಪತ್ರೆ ಸಿಬ್ಬಂದಿಯಾದ ತಿಪೇರುದ್ರಸ್ವಾಮಿ, ರಂಜಿತಾ, ಜಿ.ಟಿ.ಮಮತ, ಸಮುದಾಯ ಅಧಿಕಾರಿಗಳಾದ ಶಾವುಲ್‌ಹಮೀದ್, ಗ್ರಾಮದ ಮುಖಂಡರಾದ ಯಂಜಾರಪ್ಪ, ರಮ್ಯ, ಲಕ್ಷ್ಮೀ ದೇವಿ, ಆಶಾ ಕಾರ್ಯಕರ್ತೆಯರಾದ ವಸಂತಮ್ಮ, ಗೌರಮ್ಮ, ಶಾರದಮ್ಮ ಹಾಗೂ ಇತರರು ಕಾರ್ಯಕ್ರಮದಲ್ಲಿ ಇದ್ದರು. ೨೩ಸಿಎಲ್‌ಕೆ೩

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಮಲೇರಿಯಾ ವಿರೋಧಿ ದಿನಾಚರಣೆ ಜಾಗೃತಿ ಜಾಥಕ್ಕೆ ವೈದ್ಯಾಧಿಕಾರಿ ಡಾ.ಬಿಂದುಶ್ರೀ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ