ಅರಿವು ಮತ್ತು ಆನಂದ ಬೇರ್ಪಡಿಸಲಾಗದ ನೈಜ ಸಂಪತ್ತು: ಡಾ. ಶ್ರೀಪಾದ ಭಟ್ ಕುಮಟಾ

KannadaprabhaNewsNetwork |  
Published : Aug 15, 2025, 01:00 AM ISTUpdated : Aug 15, 2025, 01:01 AM IST
ಅರಿವು ಮತ್ತು ಆನಂದ — ಇವು ಬೇರ್ಪಡಿಸಲಾಗದ ನಿಜವಾದ ಸಂಪತ್ತು- ಡಾ. ಶ್ರೀಪಾದ ಭಟ್ ಕುಮಟಾ | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ಘಟಕ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ‘ರಂಗ ಸಂಸ್ಕ್ಕತಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೆರವೇರಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಶಿಕ್ಷಣ ಮತ್ತು ರಂಗಕಲೆಗಳನ್ನು ಪ್ರತ್ಯೇಕಿಸಿ ನೋಡುವ ಇತ್ತೀಚಿನ ಪ್ರವೃತ್ತಿ ಸಮಾಜಕ್ಕೆ ಒಳಿತಲ್ಲ. ಅರಿವು ಮತ್ತು ಆನಂದ ಇವು ಬೇರ್ಪಡಿಸಲಾಗದ ನಿಜವಾದ ಸಂಪತ್ತು ಎಂದು ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಸಾಹಿತಿ ಡಾ. ಶ್ರೀಪಾದ ಭಟ್ ಕುಮಟಾ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ಘಟಕ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ರಂಗ ಸಂಸ್ಕ್ಕತಿ’ ಎಂಬ ವಿಷಯದ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ರಂಗಭೂಮಿಯೆಂದರೆ ಹೊರ ಜಗತ್ತನ್ನು ನೋಡುವುದಷ್ಟೇ ಅಲ್ಲ, ತನ್ನನ್ನು ತಾನು ಅರಿಯುವ ಕ್ರಿಯೆ. ಇದು ಕೇವಲ ಬುದ್ಧಿ ಮತ್ತು ಭಾವದ ಕಸರತ್ತು ಮಾತ್ರವಲ್ಲ, ದೈಹಿಕ ಚಲನೆ, ಶಿಸ್ತು, ತಂಡ ಸಹಕಾರ ಮತ್ತು ಆತ್ಮವಿಶ್ವಾಸ ಬೆಳೆಸುವ ವಿಸ್ತೃತ ಪ್ರಕ್ರಿಯೆ. ರಂಗಭೂಮಿ ವ್ಯಕ್ತಿತ್ವವನ್ನು ರೂಪಿಸುವ ಸಶಕ್ತ ಸಾಧನ ಎಂದು ಹೇಳಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವೇಣು ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನರಾಂ ಸುಳ್ಯ, ಪರಿಷತ್ತಿನ ಗೌರವ ಕಾರ್ಯದರ್ಶಿ ಸದಾನಂದ ನಾರಾವಿ ಉಪಸ್ಥಿತರಿದ್ದರು. ಡಾ.ಯೋಗೀಶ ಕೈರೋಡಿ ಸ್ವಾಗತಿಸಿದರು. ಉಪನ್ಯಾಸಕಿ ಡಾ.ಜ್ಯೋತಿ ರೈ ವಂದಿಸಿದರು. ಸೌಮ್ಯ ಕುಂದರ್ ವಂದಿಸಿದರು. ಮ್ಯೂಸಿಕ್ ಫೋರಂ ವಿದ್ಯಾರ್ಥಿಗಳು ಹಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ