ಮಣ್ಣಿನ ಆರೋಗ್ಯ ನಿರ್ವಹಣೆ, ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಜಾಗೃತಿ ಅಭಿಯಾನ

KannadaprabhaNewsNetwork |  
Published : Apr 19, 2026, 02:45 AM IST
ಬಳ್ಳಾರಿ ತಾಲೂಕಿನ ಬೆಳಗಲ್ ತಾಂಡಾದಲ್ಲಿ“ಮಣ್ಣಿನ ಆರೋಗ್ಯ ನಿರ್ವಹಣೆ ಮತ್ತು ಸಮತೋಲಿತ ರಸಗೊಬ್ಬರ ಬಳಕೆ” ಕುರಿತು ಜಾಗೃತಿ ಅಭಿಯಾನ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ಮಣ್ಣಿನ ಆರೋಗ್ಯ ನಿರ್ವಹಣೆ, ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಜಾಗೃತಿ ಅಭಿಯಾನ, ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಳ್ಳಾರಿ: ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ಬಳ್ಳಾರಿಯಿಂದ ಬಳ್ಳಾರಿ ತಾಲೂಕಿನ ಬೆಳಗಲ್ ತಾಂಡಾದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಮಣ್ಣಿನ ಆರೋಗ್ಯ ನಿರ್ವಹಣೆ, ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಜಾಗೃತಿ ಅಭಿಯಾನ, ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನಿ ಡಾ.ಸಂಜಯ್ ಟಿ. ಸತುಪ್ತೆ ಮಾತನಾಡಿ, ಮಣ್ಣು ಮತ್ತು ನೀರು ಸಂರಕ್ಷಣಾ ಕ್ರಮಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮತೋಲಿತ ಪೋಷಕಾಂಶಗಳ ನಿರ್ವಹಣೆ ಸಾಧ್ಯ. ಮಣ್ಣಿನ ಸವಕಳಿ ತಡೆಗಟ್ಟುವ ಮತ್ತು ಪೋಷಕಾಂಶಗಳು ಪೋಲಾಗದಂತೆ ತಡೆಯುವ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ವಿಜ್ಞಾನಿ ಡಾ.ಕೆ.ರಾಜನ್ ಮಾತನಾಡಿ, ರೈತರು ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಕೈಗೊಳ್ಳಬೇಕು. ಈ ಭಾಗದ ಮಣ್ಣು ಆಮ್ಲೀಯ ಗುಣ ಹೊಂದಿದ್ದು, ಲಘು ಪೋಷಕಾಂಶಗಳ ಕೊರತೆಯಿದೆ. ಕೊಟ್ಟಿಗೆ ಗೊಬ್ಬರ ಮತ್ತು ಸರಿಯಾದ ಪ್ರಮಾಣದ ರಸಗೊಬ್ಬರಗಳ ಮೂಲಕ ಸರಿಪಡಿಸಬಹುದು ಎಂದು ತಿಳಿಸಿದರು.

ವಿಜ್ಞಾನಿ ಡಾ.ಎನ್.ಎಂ. ಅನುಷಾ ಮಾತನಾಡಿ, ಬೆಳಗಲ್ ತಾಂಡಾದ ಮಣ್ಣು ಕೆಂಪು ಮಣ್ಣಿನ ಮಾದರಿಯಾಗಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಗಂಧಕದ ಕೊರತೆ ಇರುವುದನ್ನು ತಿಳಿಸಿದ ಅವರು, ಸಸ್ಯಗಳ ಬೆಳವಣಿಗೆಯಲ್ಲಿ ಮಣ್ಣಿನ ಪ್ರಾಮುಖ್ಯತೆ ಮತ್ತು ಪೋಷಕಾಂಶಗಳ ಕೊರತೆಯಿಂದ ಇಳುವರಿಯ ಮೇಲಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಂಬರುವ ಖಾರಿಫ್ ಹಂಗಾಮಿಗಾಗಿ ರೈತರಿಗೆ ಜಿಪ್ಸಂ ಮತ್ತು ಲಘು ಪೋಷಕಾಂಶಗಳ ರಸಗೊಬ್ಬರಗಳನ್ನು ವಿತರಿಸಲಾಯಿತು. ಜಿಪ್ಸಂ ಬಳಕೆಯಿಂದ ಮಣ್ಣಿನ ಭೌತಿಕ ಗುಣಲಕ್ಷಣಗಳು ಹೇಗೆ ಸುಧಾರಿಸುತ್ತವೆ ಎಂಬುದನ್ನು ರೈತರ ಹೊಲದಲ್ಲಿ ಪ್ರಾಯೋಗಿಕವಾಗಿ ಪ್ರಸಾರ ಮಾಡುವ ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಡಲಾಯಿತು.

50ಕ್ಕೂ ಹೆಚ್ಚು ರೈತರು ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಬಿಷಪ್‌ ಪೀಠಾರೋಹಣ: ದೇಶದ 35 ಬಿಷಪರು, 250 ಧರ್ಮಗುರುಗಳು ಭಾಗಿ
ಕೊಡವೂರು ದೇವಳ: ಮೇ 14ರಿಂದ ಮಹಾ ರುದ್ರಯಾಗ