ಡಿಜಿಟಲ್‌ ಕಳ್ಳರಿಂದ ಜಾಗೃತಿ ಅಗತ್ಯ : ಪಿಎಸೈ ಹನುಮಂತಪ್ಪ ತಳವಾರ

KannadaprabhaNewsNetwork |  
Published : Dec 15, 2025, 03:15 AM IST
ಪೋಟೊ14ಕೆಎಸಟಿ4: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆಯ ಜಾಗೃತಿ ಸಭೆಯಲ್ಲಿ ಕುಷ್ಟಗಿ ಪೋಲಿಸ ಠಾಣೆಯ ಪಿಎಸೈ ಹನುಮಂತಪ್ಪ ತಳವಾರ ಮಾತನಾಡಿದರು. | Kannada Prabha

ಸಾರಾಂಶ

ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ

ಕುಷ್ಟಗಿ: ಅಪರಾಧ ತಡೆಯುವಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಕುಷ್ಟಗಿ ಪೊಲೀಸ ಠಾಣೆಯ ಪಿಎಸೈ ಹನುಮಂತಪ್ಪ ತಳವಾರ ಹೇಳಿದರು.

ತಾಲೂಕಿನ ದೋಟಿಹಾಳ ಗ್ರಾಮದ ಶುಖಮುನಿಸ್ವಾಮಿ ದೇವಸ್ಥಾನದ ಆವರಣ ಸಂತೆ ಮೈದಾನದಲ್ಲಿ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ನಡೆದ ಜಾಗೃತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಪರಾಧ ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಆಪರಾಧ ಆಗದಂತೆ ನೋಡಿಕೊಳ್ಳುವುದು ಉತ್ತಮ ಕಾರ್ಯ ಎಂದರು.

ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಜಾಗೃತೆಯಿಂದ ಇರಬೇಕು, ಅಂತಹ ಘಟನೆಗಳು ಕಂಡು ಬಂದಲ್ಲಿ ಸಹಾಯವಾಣಿ 112 ನಂಬರಿಗೆ ಕರೆ ಮಾಡಬೇಕು ಎಂದು ತಿಳಿಸಿದ ಅವರು, ಗ್ರಾಮದಲ್ಲಿ ಎಲ್ಲರೂ ಸಹೋದರತ್ವ ಭಾವನೆಯಿಂದ ಜೀವನ ಮಾಡಬೇಕು ಅಸ್ಪೃಶ್ಯತೆ ಆಚರಣೆ ಮಾಡಬಾರದು ಎಂದು ತಿಳಿಸಿದರು.

ವಸತಿ ನಿಲಯಕ್ಕೆ ಭೇಟಿ: ದೋಟಿಹಾಳದಲ್ಲಿನ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಪಿಎಸೈ ಹನುಮಂತಪ್ಪ ತಳವಾರ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಶಾಲಾ ವಿದ್ಯಾರ್ಥಿಗಳು ಉತ್ತಮ ವ್ಯಾಸಾಂಗ ಮಾಡಬೇಕು ದುಶ್ಚಟಗಳಿಗೆ ಬಲಿಯಾಗಬೇಡಿ ಜೀವನ ಹಾಳು ಮಾಡಿಕೊಳ್ಳಬೇಡಿ ಶೈಕ್ಷಣಿಕವಂತರಾಗಿ ಜೀವನದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದ ಅವರು, ಅಪರಾಧ ತಡೆ ಕುರಿತು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಹೇಶ ಕಾಳಗಿ, ಕರಿಯಪ್ಪ ಪೂಜಾರ, ಹನುಮಂತರಾವ ದೇಸಾಯಿ, ಸುರೇಶ ಹುನಗುಂದ, ಶಂಕರಪ್ಪ ಗೌಂಡಿ, ಗೂಡುಸಾಬ್‌ ಕೊಳ್ಳಿ ಸೇರಿದಂತೆ ವಸತಿ ನಿಲಯದ ಸಿಬ್ಬಂದಿಗಳು, ಗ್ರಾಮದ ಗಣ್ಯರು, ಗ್ರಾಮಸ್ಥರು ಹಾಗೂ ಪೊಲೀಸ ಇಲಾಖೆಯ ಸಿಬ್ಬಂದಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ