ದೇವಲಾಪುರ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯ ಶಿಕ್ಷಕ ಚಿಕ್ಕ ಬೋರಯ್ಯ ತಿಳಿಸಿದರು.
ಬೂತ್ ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ನಾಗರಿಕರು ಅಗತ್ಯ ಮಾಹಿತಿಗಳನ್ನು ಒದಗಿಸಬೇಕು. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಹೊಸದಾಗಿ ಹೆಸರು ಸೇರ್ಪಡೆ ಹಾಗೂ 18 ವರ್ಷ ತುಂಬಿದ ಪ್ರತಿ ವ್ಯಕ್ತಿಯೂ ಹೊಸದಾಗಿ ನೋಂದಾಯಿಸಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು.
ಗ್ರಾಪಂ ಪಿಡಿಒ ಹರೀಶ್ ಗೌಡ, ವಿದ್ಯಾರ್ಥಿಗಳು ತಮ್ಮ ಗ್ರಾಮ ವ್ಯಾಪ್ತಿಯ ಬಡಾವಣೆಗಳಲ್ಲಿ ಅನಕ್ಷರಸ್ಥರಿಗೆ ಹಾಗೂ ಅಗತ್ಯವಿರುವವರಿಗೆ ಮತಪಟ್ಟಿ ಪರಿಷ್ಕರಣೆಗೆ ನೆರವು ನೀಡಬೇಕು. ಗ್ರಾಮದಿಂದ ವಲಸೆ ಹೋದವರು ಎರಡು ಕಡೆ ಮತ ಪಟ್ಟಿಯಲ್ಲಿ ಹೆಸರು ಹೊಂದಿರುವರು, ಒಂದು ಕಡೆ ಮಾತ್ರ ಮತ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮಾರ್ಗದರ್ಶನ ನೀಡಬೇಕು. ಮತದಾನದ ಬಗ್ಗೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.ಇದೇ ವೇಳೆ ಶಾಲಾ ವಿದ್ಯಾರ್ಥಿಗಳು ಗ್ರಾಮದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು. ಗ್ರಾಪಂ ಸಿಬ್ಬಂದಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು ಭಾಗವಹಿಸಿದ್ದರು.
ಮಂಡ್ಯ: ೬೬/೧೧ ಕೆ.ವಿ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-೦೬ ಹೊಸಹಳ್ಳಿ ಫೀಡರ್ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.೬ ರಂದು ಬೆಳಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೀಡರ್ ವ್ಯಾಪ್ತಿಯ ಪ್ರದೇಶಗಳಾದ ದ್ವಾರಕ ನಗರ, ಹೊಸಹಳ್ಳಿ, ಕಾವೇರಿನಗರ ೧ ನೇ ಹಂತ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕಾಂ ಎಂಜಿನಿಯರ್ ಆರ್.ಟಿ.ಚಂದ್ರಮೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.