-ಡಿಸಿ ರಾಹುಲ್ ಪಾಂಡ್ವೆ ಸಲಹೆ । ಯಾದಗಿರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ ಕಾನೂನು ಅರಿವು- ನೆರವು ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಯಾದಗಿರಿ
ಮಾನವ ಕಳ್ಳಸಾಗಣೆ ಎನ್ನುವುದು ವ್ಯಕ್ತಿಗಳನ್ನು ಬಲವಂತ, ವಂಚನೆ, ಅಥವಾ ಬೆದರಿಕೆಯ ಮೂಲಕ ಬಲೆಗೆ ಬೀಳಿಸಿ, ಸಾಗಣೆ ಮಾಡಿ, ಲಾಭಕ್ಕಾಗಿ ಶೋಷಣೆ ಮಾಡುವ ಒಂದು ಅಮಾನವೀಯ ಮತ್ತು ಕಾನೂನುಬಾಹಿರ ಕೃತ್ಯವಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸರ್ಕಾರಿ ಪದವಿ ಮಹಾವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ”-2026 ಅಂಗವಾಗಿ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಮತ್ತು ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆ ಮತ್ತು ಲೈಂಗಿಕ ದಂಧೆಗೆ ತಳ್ಳುವುದು. ಕಡಿಮೆ ವೇತನ ಅಥವಾ ಯಾವುದೇ ವೇತನವಿಲ್ಲದೆ ಕೃಷಿ, ಇಟ್ಟಿಗೆ ಭಟ್ಟಿ, ಅಥವಾ ಗೃಹ ಕೆಲಸಗಳಲ್ಲಿ ಬಲವಂತವಾಗಿ ದುಡಿಸಿಕೊಳ್ಳುವುದು.
ಒಳ್ಳೆಯ ಉದ್ಯೋಗದ ಆಸೆ ತೋರಿಸಿ ಯುವಕ-ಯುವತಿಯರನ್ನು ಬೇರೆ ನಗರ ಅಥವಾ ದೇಶಗಳಿಗೆ ಸಾಗಿಸಲಾಗುತ್ತದೆ. ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಅರಿವಿಲ್ಲದಿರುವುದು ಕಳ್ಳಸಾಗಣೆದಾರರಿಗೆ ವರದಾನವಾಗುತ್ತದೆ
ಅನೈತಿಕ ಸಾಗಣೆ ತಡೆ ಕಾಯ್ದೆ ಲೈಂಗಿಕ ಶೋಷಣೆಗಾಗಿ ನಡೆಯುವ ಕಳ್ಳಸಾಗಣೆಯನ್ನು ತಡೆಯಲು ಈ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ.
ಮಾನವ ಕಳ್ಳಸಾಗಾಣಿಕೆ ವಿರೋಧಿ ಘಟಕವು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಪೊಲೀಸ್ ಇಲಾಖೆಯಲ್ಲಿ ಈ ವಿಶೇಷ ಘಟಕವು ಕಾರ್ಯನಿರ್ವಹಿಸುತ್ತಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಭೀಮರಾಯ, ಪಿಎಸ್ ಐ ಹಣಮಂತ ಬಂಕಲಗಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.