ಬಿಡದಿ ಪುರಸಭೆ ಪ್ರಭಾರ ಅಧ್ಯಕ್ಷರಾಗಿ ಆಯಿಷಾ ಖಲೀಲ್ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Aug 07, 2026, 01:15 AM IST
6ಕೆಆರ್ ಎಂಎನ್ 1.ಜೆಪಿಜಿಬಿಡದಿ ಪುರಸಭೆ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆಯಿಷಾ ಖಲೀಲ್ ಅವರನ್ನು ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ರಾಮನಗರ: ಬಿಡದಿ ಪುರಸಭೆ ಉಪಾಧ್ಯಕ್ಷೆ ಆಯಿಷಾ ಖಲೀಲ್ ಪ್ರಭಾರ ಅಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು

ರಾಮನಗರ: ಬಿಡದಿ ಪುರಸಭೆ ಉಪಾಧ್ಯಕ್ಷೆ ಆಯಿಷಾ ಖಲೀಲ್ ಪ್ರಭಾರ ಅಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಅಧ್ಯಕ್ಷರಾಗಿದ್ದ ಭಾನುಪ್ರಿಯಾ ಸಂಪತ್ತು ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪೌರಾಡಳಿತ ನಿಯಮದಂತೆ ಉಪಾಧ್ಯಕ್ಷೆ ಆಯಿಷಾ ಖಲೀಲ್ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಪುರಸಭೆಯಲ್ಲಿ ಜೆಡಿಎಸ್ ಆಡಳಿತ ನಡೆಸುತ್ತಿದ್ದು, ಅಧ್ಯಕ್ಷ ಸ್ಥಾನದ ಅಧಿಕಾರ ಅವಧಿಯನ್ನು ಪಕ್ಷದ ವರಿಷ್ಠರು ಹಂಚಿಕೆ ಮಾಡಿದ್ದಾರೆ. ಅದರಂತೆ ಬೇರೊಬ್ಬ ಸದಸ್ಯರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಭಾನುಪ್ರಿಯಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆಯಿಷಾ ಖಲೀಲ್, ಬಿಡದಿ ಪುರಸಭೆಯ ಸದಸ್ಯರ ಸಹಕಾರದಲ್ಲಿ ಮೂಲಭೂತ ಸೌಕರ್ಯಗಳು ಸಾಕಾರವಾಗುತ್ತಿವೆ. ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನದಲ್ಲಿ ನಾನು ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ನನ್ನ ಮೇಲಿಟ್ಟಿರುವ ನಂಬಿಕೆ ಮತ್ತು ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿಭಾಯಿಸುತ್ತೇನೆ ಎಂದು ಹೇಳಿದರು.

ಪಕ್ಷಾತೀತವಾಗಿ ಎಲ್ಲ ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರದಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪುರಸಭೆ ವತಿಯಿಂದ ಕೈಗೊಳ್ಳಬೇಕಾದ ಎಲ್ಲಾ ಬಾಕಿ ಕೆಲಸಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.

ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಎಸ್.ಲೋಹಿತ್ ಕುಮಾರ್‌, ಸದಸ್ಯರಾದ ರಮೇಶ್, ನಾಗರಾಜು, ಸೋಮಶೇಖರ್, ಲಲಿತಾನರಸಿಂಹಯ್ಯ, ಮನು ಲೋಕೇಶ್, ಮಂಜುಳಾ, ಯಲ್ಲಮ್ಮ, ಮುಖ್ಯಾಧಿಕಾರಿ ಮಂಜುಳಮ್ಮ , ಮುಖಂಡರಾದ ನರಸಿಂಹಯ್ಯ, ರಮೇಶ್, ಶಂಕುಕುಮಾರ್, ಖಲೀಲ್ ಸೇರಿದಂತೆ ಅನೇಕರು ಪ್ರಭಾರ ಅಧ್ಯಕ್ಷೆ ಅಯಿಷಾ ಖಲೀಲ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.6ಕೆಆರ್ ಎಂಎನ್ 1.ಜೆಪಿಜಿ

ಬಿಡದಿ ಪುರಸಭೆ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆಯಿಷಾ ಖಲೀಲ್ ಅವರನ್ನು ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಎಂ ಡಾ. ಪರಮೇಶ್ವರ್‌ ಜನ್ಮದಿನಾಚರಣೆ
75 ಬುದ್ಧ ವಿಗ್ರಹ ವಿತರಣೆಗೆ ಚಾಲನೆ