ಐಗೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ

KannadaprabhaNewsNetwork |  
Published : Nov 17, 2024, 01:22 AM IST
ಚಿತ್ರ.1:  ಐಗೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ | Kannada Prabha

ಸಾರಾಂಶ

ಐಗೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ ನಡೆಯಿತು. ತೋಟ ಗಾರಿಕೆ ಇಲಾಖೆಯಲ್ಲಿ ಬೆಳೆಗಾರರಿಗೆ ನೀಡುವ ಕರಿಮೆಣಸು ಗಿಡ ಹೊರ ಜಿಲ್ಲೆಗೆ ರವಾನೆಯಾಗಿದೆ ಎಂಬ ಗಂಭೀರ ಚರ್ಚೆಗೆ ಗ್ರಾಸ ಒದಗಿಸಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಐಗೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಅಧ್ಯಕ್ಷರಾದ ಜಿ.ಕೆ.ವಿನೋದ್ ಅಧ್ಯಕ್ಷತೆಯಲ್ಲಿ ನಡೆಯಿತು.

ಅರಣ್ಯ ಇಲಾಖೆಯಿಂದ ಕಾಡಾನೆಗೆ ಅಳವಡಿಸಿದ ಬ್ರಾಂಕ್ರಾಡ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆಲ ಜೀವನ್ ಕುಡಿಯುವ ನೀರಿನ ಕಾಮಗಾರಿಯಲ್ಲಿ ಕಳಪೆಯಾಗಿದೆ. ಬಡವರಿಗೆ ನೀರು ಸಿಗುತ್ತಿಲ್ಲ. ತೋಟಗಾರಿಕೆ ಇಲಾಖೆಯಲ್ಲಿ ಬೆಳೆಗಾರರಿಗೆ ನೀಡುವ ಕರಿಮೆಣಸು, ಗಿಡ ಹೊರ ಜಿಲ್ಲೆಗೆ ರವಾನೆಯಾಗಿದೆ ಎಂಬ ಗಂಭೀರ ಚರ್ಚೆಗೆ ಗ್ರಾಸ ಒದಗಿಸಿತು.

ಕಾಜೂರು ಅರಣ್ಯ ವಸತಿ ಗೃಹದ ಬಳಿ ಬಸ್ ನಿಲ್ದಾಣದಲ್ಲಿ ಕಾಡಾನೆಗೆ ತಡೆಗಟ್ಟುವ ರೈಲ್ವೆ ಬ್ಯಾರಿಕೇಡ್ ರಚಿಸಲಾಗಿದೆ. ಇದರಿಂದ ಕಾಡಾನೆ ದಾಳಿಗೆ ಸಾರ್ವಜನಿಕರು ವಿದ್ಯಾರ್ಥಿಗಳು ಈ ಭಾಗದಲ್ಲಿ ಸಂಚರಿಸಲು ತೊಂದರೆಯಾಗಿದೆ ಎಂದು ಎಂ.ಕೆ.ಮೋಹನ್ ಪ್ರಸ್ತಾಪಿಸಿದರು. ಶಾಸಕರಿಗೂ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತೋಟಗಾರಿಕೆ ಇಲಾಖೆಯಲ್ಲಿ ಬೆಳೆಗಾರರಿಗೆ ನೀಡುವ ಕರಿಮೆಣಸು ಗಿಡ ನೈಜ ಬೆಳೆಗಾರರಿಗೆ ಸಿಗುತ್ತಿಲ್ಲ. ಹೊರ ಜಿಲ್ಲೆಗೆ ಲಾರಿಯಲ್ಲಿ ಸಾಗಿಸಲಾಗಿದೆ ಎಂದು ಪುಚ್ಚಿಮಂಡ ಮೋಹನ್ ಆರೋಪಿಸಿ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಆಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕಳಪೆಯಾಗಿದೆ ಎಂದು ಮಾಜಿ ಗ್ರಾ.ಪಂ. ಸದಸ್ಯ ದಿನೇಶ್ ಹೇಳಿದರು. ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದೆ. ಅಂತ್ಯೋದಯ ಕಾರ್ಡುದಾರರಾದ ಗಿರಿಜನರಿಗೆ ತೂಕದಲ್ಲಿ ವಂಚನೆ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದರು.

ಕಂದಾಯ ಇಲಾಖೆ, ಆರೋಗ್ಯ, ಆಹಾರ, ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಬೇಬಿ, ಪೂರ್ಣಿಮಾ, ಜಾನಕ್ಕಿ, ಮೇದಪ್ಪ, ಜೋಯಪ್ಪ, ಜೈನುದ್ದೀನ್, ಪವಿತ್ರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಸಿ.ಪೂರ್ಣಕುಮಾರ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ