ಬಾಳೆಹೊನ್ನೂರು: ಜ.22ರಂದು ಆಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನ ಪತ್ರಿಕೆಯನ್ನು ಶನಿವಾರ ಶ್ರೀಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ವಿಹಿಂಪ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಮುಖರಾದ ಬಿ.ಜಗದೀಶ್ಚಂದ್ರ, ಕೆ.ಟಿ.ವೆಂಕಟೇಶ ಮತ್ತಿತರರು ಇದ್ದರು.೧೩ಬಿಹೆಚ್ಆರ್ ೩: ಆಯೋಧ್ಯೆ ರಾಮಮಂದಿರ ಉದ್ಘಾಟನೆಯ ಆಹ್ವಾನ ಪತ್ರಿಕೆಯನ್ನು ವಿಹಿಂಪ ಪದಾಧಿಕಾರಿಗಳು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಆರ್.ಡಿ.ಮಹೇಂದ್ರ, ಬಿ.ಜಗದೀಶ್ಚಂದ್ರ, ಕೆ.ಟಿ.ವೆಂಕಟೇಶ ಇದ್ದರು.