ಬುಡಮಟ್ಟದಿಂದ ರೋಗ ನಿವಾರಣೆ ಮಾಡುವ ಆಯುಷ್‌

KannadaprabhaNewsNetwork |  
Published : Jul 31, 2026, 02:30 AM IST
ಜಿಲ್ಲಾಧಿಕಾರಿ | Kannada Prabha

ಸಾರಾಂಶ

ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ, ಸರ್ಕಾರಿ ನೌಕರರು ತಮ್ಮ ಕರ್ತವ್ಯಗಳ ಜತೆಗೆ ತಮ್ಮ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ನಮ್ಮ ವೈಯಕ್ತಿಕ ಆರೋಗ್ಯಕ್ಕೆ ನೀಡುವ ಸಮಯವು ಮುಂದೆ ನಮ್ಮ ಭವಿಷ್ಯದ ಜೀವನವನ್ನು ನೆಮ್ಮದಿಯಿಂದ ಕಳೆಯಲು ಸಾಧ್ಯವಾಗಲಿದೆ.

ಧಾರವಾಡ:

ಆಲೋಪಥಿಕ್ ಚಿಕಿತ್ಸೆ ತೆಗೆದುಕೊಂಡರೆ ಅದು ರೋಗದ ಲಕ್ಷಣ ಮಾತ್ರ ಕಡಿಮೆ ಮಾಡುತ್ತದೆ. ಆದರೆ, ಆಯುಷ್ ವೈದ್ಯ ಪದ್ಧತಿಯಡಿ ಚಿಕಿತ್ಸೆಗಳು ರೋಗವನ್ನು ಬುಡಮಟ್ಟದಿಂದ ನಿರ್ಮೂಲನೆ ಮಾಡುತ್ತವೆ. ನಿತ್ಯದ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಸೂಕ್ತ ಮನೆಮದ್ದು, ಗಿಡ ಮೂಲಿಕೆ ಔಷಧಿಗಳನ್ನು ವೈದ್ಯರ ಸಲಹೆ ಮೇರೆಗೆ ಬಳಸುವುದರಿಂದ ಸಂಪೂರ್ಣ ಗುಣಮುಖರಾಗಬಹುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ ವಿಶೇಷ ಆರೋಗ್ಯ ತಪಾಸಣೆ, ಚಿಕಿತ್ಸೆ, ಫಥ್ಯ, ಯೋಗಾಸನ ಮತ್ತು ಜೀವನ ಶೈಲಿ ಮಾಹಿತಿ ಶಿಬಿರ ಉದ್ಘಾಟಿಸಿದ ಅವರು, ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ, ಸರ್ಕಾರಿ ನೌಕರರು ತಮ್ಮ ಕರ್ತವ್ಯಗಳ ಜತೆಗೆ ತಮ್ಮ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ನಮ್ಮ ವೈಯಕ್ತಿಕ ಆರೋಗ್ಯಕ್ಕೆ ನೀಡುವ ಸಮಯವು ಮುಂದೆ ನಮ್ಮ ಭವಿಷ್ಯದ ಜೀವನವನ್ನು ನೆಮ್ಮದಿಯಿಂದ ಕಳೆಯಲು ಸಾಧ್ಯವಾಗಲಿದೆ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ಧನಗೌಡರ ಮಾತನಾಡಿ, ಸಂಘದ ಪರವಾಗಿ ಇಂತಹ ರಚನಾತ್ಮಕ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಆಯುಷ್ ಪಂಚಕರ್ಮ ವಿಭಾಗದ ತಜ್ಞ ವೈದ್ಯಾಧಿಕಾರಿಗಳಾದ ಡಾ. ಸಂತೋಷ ತಾಡಪತ್ರಿ, ಡಾ. ಶಶಿಧರ ತಳಕಲ್, ಡಿಎಚ್‌ಒ ಡಾ. ಪರಶುರಾಮ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಕಬಾಡೆ ಇದ್ದರು. ಶಿಬಿರದಲ್ಲಿ 260 ಫಲಾನುಭವಿಗಳು ಆಯುಷ್ ಆರೋಗ್ಯ ಸೇವೆ ಪಡೆದರು. 46 ಫಲಾನುಭವಿಗಳಿಗೆ ಹೆಚ್ಚಿನ ಆಯುರ್ವೇದ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ಮತ್ತು ಆಯುಷ್ ಪಂಚಕರ್ಮ ವಿಭಾಗದಲ್ಲಿ ಚಿಕಿತ್ಸೆ ಪಡೆಯಲು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ವೆಂಕಟರಾಮ್ ಕಟ್ಟಿಗೆ ರಾಷ್ಟ್ರೀಯ ಸಮುದಾಯ ಸೇವಾ ಪ್ರಶಸ್ತಿ
ಸಮಾಜಕ್ಕೆ ಅರ್ಪಿತವಾದ ಜೀವನವೇ ಪಾವನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು