ಜ. 31ರಿಂದ ಫೆ.1-ಮಂಗಳೂರಲ್ಲಿ ಆಯುಷ್ ಹಬ್ಬ: ಸಂಸದರಿಂದ ಪೋಸ್ಟರ್ ಬಿಡುಗಡೆ

KannadaprabhaNewsNetwork |  
Published : Jan 18, 2026, 03:15 AM IST
ಆಯುಷ್‌ ಹಬ್ಬದ ಪೋಸ್ಟರ್‌ ಬಿಡುಗಡೆಗೊಳಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ  | Kannada Prabha

ಸಾರಾಂಶ

ಜನವರಿ 31 ಮತ್ತು ಫೆಬ್ರವರಿ1 ರಂದು ಮಂಗಳೂರು ನಗರದ ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ‘ಆಯುಷ್ ಹಬ್ಬ 2026’ ಇದರ ಅಂಗವಾಗಿ ‘ಹೃದಯ ಆರೋಗ್ಯ ಸಂಭ್ರಮ’ ಆಯೋಜಿಸಲಾಗುತ್ತಿದೆ. ಇದರ ಪ್ರಚಾರಾಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನಲ್ಲಿ ಶುಕ್ರವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಜನವರಿ 31 ಮತ್ತು ಫೆಬ್ರವರಿ1 ರಂದು ಮಂಗಳೂರು ನಗರದ ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ‘ಆಯುಷ್ ಹಬ್ಬ 2026’ ಇದರ ಅಂಗವಾಗಿ ‘ಹೃದಯ ಆರೋಗ್ಯ ಸಂಭ್ರಮ’ ಆಯೋಜಿಸಲಾಗುತ್ತಿದೆ. ಇದರ ಪ್ರಚಾರಾಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನಲ್ಲಿ ಶುಕ್ರವಾರ ನಡೆಯಿತು.

ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪ್ರಧಾನಮಂತ್ರಿ ‌ನರೇಂದ್ರ‌ ಮೋದಿಯವರು ಆಯುಷ್ ಪದ್ಧತಿಗಳನ್ನು ಆರೋಗ್ಯ ಕ್ಷೇತ್ರದ ಪ್ರಧಾನವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದಾರೆ.ಇದರಿಂದಾಗಿ ಆಯುಷ್ ಪದ್ಧತಿಗಳು ವಿಶ್ವದಾದ್ಯಂತ ಜನಮಾನಸದಲ್ಲಿ ವಿಶ್ವಾಸ ಮೂಡಿಸುತ್ತಿದೆ. ಆಯುಷ್ ಹಬ್ಬ2026 ರಲ್ಲಿ ಹೃದಯದ ಆರೋಗ್ಯ ರಕ್ಷಣೆಗಾಗಿ ಆದ್ಯತೆನೀಡಿ ಹೃದಯ ರೋಗ ತಜ್ಞರಿಂದ ತಪಾಸಣೆ ಹಾಗೂ ಆಯುಷ್ ವೈದ್ಯ ಪದ್ಧತಿಗಳ ಆಹಾರ, ವಿಹಾರ,ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮೊದಲಾದ ಸರಳ ವಿಧಾನಗಳ ಮೂಲಕ ರೋಗ ಬರದಂತೆ ತಡೆಯುವ ಕ್ರಮ ಮತ್ತು ಚಿಕಿತ್ಸಾ ಮಾರ್ಗೋಪಾಯಗಳ ಮಾಹಿತಿ ನೀಡುವ ಉತ್ತಮ ಕಾರ್ಯಕ್ರಮ ಇದಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಲು ಆಯುಷ್ ಹಬ್ಬಕ್ಕೆ ಭೇಟಿ‌ ನೀಡಲು ಕರೆಯಿತ್ತರು.ಈ ಸಂದರ್ಭದಲ್ಲಿ ಆಯುಷ್ ಹಬ್ಬ ಸಮಿತಿಯ ಗೌರವಾಧ್ಯಕ್ಷೆ ಡಾ.ಆಶಾ ಜ್ಯೋತಿ ರೈ ಮಾಲಾಡಿ, ಸಂಘಟನಾ ಕಾರ್ಯದರ್ಶಿ ಡಾ.ಸಚಿನ್ ನಡ್ಕ, ಡಾ. ದೇವದಾಸ್ ಪುತ್ರನ್, ಡಾ.ಪ್ರತಿಭಾ ರೈ ಇದ್ದರು.

---------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ