ರಂಗೇನಹಳ್ಳಿಗೆ ಆಯುಷ್ ಆಧಿಕಾರಿ ಡಾ.ಚಂದ್ರಕಾಂತ್ ಭೇಟಿ

KannadaprabhaNewsNetwork |  
Published : Jun 07, 2024, 12:15 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ(ಹಿರಿಯೂರು)   | Kannada Prabha

ಸಾರಾಂಶ

ಹಿರಿಯೂರು ತಾಲೂಕಿನ ರಂಗೇನಹಳ್ಳಿ ಗ್ರಾಮಕ್ಕೆ ಆಯುಷ್ ಆಧಿಕಾರಿ ಭೇಟಿ ನೀಡಿ ಸಸ್ಯ ಸೇವನೆಯಿಂದ ಮೃತಪಟ್ಟ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು ತಾಲೂಕಿನ ರಂಗೇನಹಳ್ಳಿ ಗ್ರಾಮದ ಯುವತಿಯೋರ್ವಳು ಗಿಡಮೂಲಿಕೆಯನ್ನು ಔಷಧಿ ಸಸ್ಯ ಎಂದು ಸೇವಿಸಿ ಮೃತಪಟ್ಟ ಹಿನ್ನಲೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಅವರು ಸಂತ್ರಸ್ಥರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಗಿಡಮೂಲಿಕೆ ಔಷಧಿ ಚಿಕಿತ್ಸೆ ಬೇಕಾದಲ್ಲಿ ಹತ್ತಿರದ ಆಯುಷ್ ಚಿಕಿತ್ಸಾಲಯ ಅಥವಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿ ಇರುವಂತಹ ಪದವಿಧರ ಆಯುಷ್ ವೈದ್ಯರಿಂದಲೇ ಚಿಕಿತ್ಸೆ ಪಡೆಯಲು ಸೂಚಿಸಿದರು.ಇತ್ತೀಚಿನ ವೈಜ್ಞಾನಿಕ ಬೆಳವಣಿಗೆಗಳಿಂದಾಗಿ ಆಯುರ್ವೇದ ಔಷಧಿಗಳನ್ನು ಕಷಾಯ, ಚೂರ್ಣ, ಸ್ವರಸ ಇತ್ಯಾದಿ ರೂಪದಲ್ಲಿ ತಯಾರಿಸಬೇಕಾದ ಅವಶ್ಯಕತೆ ಇಲ್ಲ. ಆಧುನಿಕ ಔಷಧಿಗಳಂತೆ ಗಿಡಮೂಲಿಕೆ ಔಷಧಿಗಳೂ ಮಾತ್ರೆ, ಕ್ಯಾಪ್ಸುಲ್, ಟಾನಿಕ್‍ಗಳ ರೂಪದಲ್ಲಿ ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸರ್ಕಾರದ ಜಿಎಂಪಿ ಮಾನದಂಡಗಳ ಅನುಸಾರ ತಯಾರಿಸಲ್ಪಟ್ಟು ಗ್ರಾಹಕರಿಗೆ ದೊರೆಯುತ್ತವೆ. ಇವುಗಳನ್ನು ಬಳಸುವುದು ಸುಲಭ ಹಾಗೂ ಸುರಕ್ಷಿತ ಎಂದು ತಿಳಿಸಿದರು.

ನಾಟಿವೈದ್ಯಕ್ಕಿಂತ ಆಯುರ್ವೇದ ವೈದ್ಯ ಪದ್ಧತಿಯು ಅತ್ಯಂತ ವೈಜ್ಞಾನಿಕ ಹಾಗೂ ಸುರಕ್ಷಿತವಾಗಿದೆ. ಕೆಲವೊಮ್ಮೆ ಗಿಡದ ಎಲೆಗಳು ಒಂದೇ ತೆರನಾಗಿದ್ದು, ಔಷಧಿ ಸಸ್ಯವನ್ನು ಗುರುತಿಸುವುದು ಕಷ್ಟವಾಗುತ್ತದೆ. ಅಂತ ಸಮಯದಲ್ಲಿ ಹತ್ತಿರದ ಆಯುರ್ವೇದ ವೈದ್ಯಾಧಿಕಾರಿಗಳನ್ನು ಭೇಟಿ ಮಾಡಿ ಆ ಗಿಡವು ಸುರಕ್ಷಿತವೇ ಇಲ್ಲವೇ ಎಂಬುದನ್ನು ಖಾತ್ರಿಪಡಿಸಿಕೊಂಡು ನಂತರ ಔಷಧಿಯಾಗಿ ಬಳಸಬೇಕು. ಮನೆ ಮದ್ದು ಹಾಗೂ ಔಷಧಿ ಸಸ್ಯಗಳನ್ನು ಬಳಸುವುದಾದರೆ ಅದರ ಬಗ್ಗೆ ಪೂರ್ಣ ತಿಳುವಳಿಕೆ ಇರುವವರೊಂದಿಗೆ ವಿಚಾರಿಸಿ ಸೇವಿಸಬೇಕು. ಸಾಮಾನ್ಯವಾಗಿ ಸಾರ್ವಜನಿಕರು ತಿಳಿದುಕೊಂಡಂತೆ ಎಲ್ಲಾ ಗಿಡಗಳು ಆರೋಗ್ಯಕ್ಕೆ ಪೂರಕವಾಗಿ ಸುರಕ್ಷಿತವಾಗಿರುವುದಿಲ್ಲ. ಸರಿಯಾದ ವಿಧಾನದಲ್ಲಿ ಸರಿಯಾದ ಪ್ರಮಾಣದಲ್ಲಿ ಸೇವಿಸದಿದ್ದರೆ ಹಾಗೂ ವಿವೇಚನಾ ರಹಿತವಾಗಿ ಸೇವಿಸಿದರೆ ಅಪಾಯ ತಪ್ಪಿದ್ದಲ್ಲ. ಆಯುರ್ವೇದ ಚಿಕಿತ್ಸೆಗಳು ಸರ್ಕಾರದ ವತಿಯಿಂದಲೇ ಆಯುಷ್ ಚಿಕಿತ್ಸಾಲಯಗಳಲ್ಲಿ ಉಚಿತವಾಗಿ ಲಭ್ಯ ಇವೆ ಇವುಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಈ ವೇಳೆ ಹಿರಿಯೂರು ಆಯುರ್ವೇದ ಸರ್ಕಾರಿ ಆಸ್ಪತ್ರೆಯ ತಜ್ಞವೈದ್ಯ ಡಾ. ಟಿ.ಶಿವಕುಮಾರ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!