ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳು ನೋಟ್ಬುಕ್ ಉಚಿತವಾಗಿ ವಿತರಿಸಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಾದ ಜಯಂತ್ ಅಗ್ರಬೈಲ್ ಬಿ.ಸಿ.ರೋಡ್, ಯತೀಶ್ ಕೈಕುಂಜೆ ಬೆಂಗಳೂರು, ಚರಣ್ ಕೈಕುಂಜೆ ಕುವೈಟ್ ಮತ್ತು ಸಂದೀಪ್ ಮಠ ದುಬೈ ಅವರು ಒದಗಿಸಿದ ನೋಟ್ ಬುಕ್ಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ, ಮಕ್ಕಳು ದಾನಿಗಳು ನೀಡಿದ ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಈ ವರ್ಷದಿಂದ ಒಂದನೇ ತರಗತಿಯಿಂದಲೇ ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ಕಲಿಕೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ದಾನಿಗಳಾದ ಹಿರಿಯ ವಿದ್ಯಾರ್ಥಿ ಜಯಂತ್ ಅಗ್ರಬೈಲ್ ಪುಸ್ತಕ ವಿತರಿಸಿ ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗಣೇಶ್ ಕಾಮಾಜೆ ಶುಭಹಾರೈಸಿದರು. ಹಿರಿಯ ವಿದ್ಯಾರ್ಥಿ, ಪತ್ರಕರ್ತ ಸಂದೀಪ್ ಸಾಲ್ಯಾನ್ ಮಾತನಾಡಿದರು.
ಈ ಸಂದರ್ಭ ಹಿರಿಯ ವಿದ್ಯಾರ್ಥಿ ಹಾಗೂ ಎಸ್.ಡಿ.ಎಂ.ಸಿ. ಸದಸ್ಯ ದೇವದಾಸ್ ಅಗ್ರಬೈಲ್ ಪುಸ್ತಕ ವಿತರಿಸಿ ಶುಭ ಹಾರೈಸಿದರು.
ಜಯಂತ್ ಅಗ್ರಬೈಲ್ ಅವರ ಪತ್ನಿ ಲಾವಣ್ಯ ಮತ್ತು ಯತೀಶ್ ಕೈಕುಂಜೆ ಅವರ ಪತ್ನಿ ಪ್ರಿಯಾಂಕಾ, ಎಸ್.ಡಿ.ಎಂ.ಸಿ.ಸದಸ್ಯೆ ವಿನೋದಾ, ಮಜಿ ವೀರಕಂಭ ಶಾಲಾಭಿವೃದ್ಧಿಗೆ ಶ್ರಮಿಸುತ್ತಿರುವ ಚಿನ್ನ ಮೈರ, ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ. ಉಪಸ್ಥಿತರಿದ್ದರು. ಹಿರಿಯ ಸಹಶಿಕ್ಷಕಿ ತಾಹಿರಾ ವಂದಿಸಿದರು. ಹಿರಿಯ ಸಹಶಿಕ್ಷಕಿ ಸುಶೀಲಾ ಲಿಂಗಪ್ಪ, ಶಿಕ್ಷಕಿಯರಾದ ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ ಕಂಪ್ಯೂಟರ್ ಶಿಕ್ಷಕ ಶಿವಮೂರ್ತಿ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.