ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಬಿ.ಸುಜಿತ್‌ ಆಯ್ಕೆ

KannadaprabhaNewsNetwork |  
Published : Feb 10, 2025, 01:46 AM IST
ಫೋಟೋ 9ಪಿವಿಡಿ6ಪಾವಗಡ ತಾಲೂಕು ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಬಿ.ಸುಜಿತ್‌ ಆಯ್ಕೆಫೋಟೋ 9ಪಿವಿಡಿ7ಪಾವಗಡ ವಿಧಾನಸಭಾ ಕ್ಷೇತ್ರದ (ಅಸೆಂಬ್ಲಿ)ಯುವ ಕಾಂಗ್ರೆಸ್ ಅಧ್ಯಕ್ಷರಾಗಿ  ಚಿನ್ನಮ್ಮನಹಳ್ಳಿಯ ಬಿ.ಸುಜಿತ್  ಹಾಗೂ ನಗರ ಘಟಕದ ಅಧ್ಯಕ್ಷರಾಗಿ ನವೀನ್ ಕುಮಾರ್ ಜಯಭೇರಿ ಸಾಧಿಸಿದ್ದು ಶಾಸಕ ಎಚ್.ವಿ.ವೆಂಕಟೇಶ್‌ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. | Kannada Prabha

ಸಾರಾಂಶ

ಯುವ ಕಾಂಗ್ರೆಸ್ ತಾಲೂಕು ಘಟಕದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಪಾವಗಡ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಚಿನ್ನಮ್ಮನಹಳ್ಳಿಯ ಬಿ.ಸುಜಿತ್ ಹಾಗೂ ನಗರ ಘಟಕದ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಪಾವಗಡ

ಯುವ ಕಾಂಗ್ರೆಸ್ ತಾಲೂಕು ಘಟಕದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಪಾವಗಡ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಚಿನ್ನಮ್ಮನಹಳ್ಳಿಯ ಬಿ.ಸುಜಿತ್ ಹಾಗೂ ನಗರ ಘಟಕದ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ.

ಒಂದು ತಿಂಗಳ ಹಿಂದೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಆನ್‌ಲೈನ್‌ ಪ್ರಕ್ರಿಯೆ ಮೂಲಕ ಮತದಾನ ನಡೆಸಿದ್ದು, ಈ ಸಂಬಂಧ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹೆಚ್ಚು ಮತ ಪಡೆಯುವ ಮೂಲಕ ತಾಲೂಕು ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷರಾಗಿ ಬಿ.ಸುಜಿತ್‌ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ನಗರ ಘಟಕದ ಅಧ್ಯಕ್ಷರಾಗಿ ನವೀನ್‌ಕುಮಾರ್‌ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಭಾನುವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರ ಮಾಜಿ ಅಧ್ಯಕ್ಷ ಜಿ ಮಹೇಶ್, ಹೊಸಹಳ್ಳಿ ಮಂಜುನಾಥ್,ಪಳವಳ್ಳಿ ಶಿವಕುಮಾರ್, ಕೃಷ್ಣಮೂರ್ತಿ, ಪ್ರಕಾಶ್ , ಬಾಲು,ಪಿ ಎಲ್ ಮಣಿ, ಓಂಕಾರ್ ನಾಯಕ, ಹನುಮೇಶ್,ಗೋವಿಂದ ಯಾದವ್,ಭಾನು ಸೇರಿ ಇನ್ನೂ ಮುಂತಾದ ಯುವ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರದಲ್ಲಿ ಪ್ರಾರಂಭವಾದ ಮೆಕ್ಕೆಜೋಳ ಖರೀದಿ, ಮುಗಿಯದ ಗೊಂದಲ!
ವಿಶ್ವಕರ್ಮ ಮಹಾ ಒಕ್ಕೂಟ ಜಿಲ್ಲಾ ಘಟಕ ಉದ್ಘಾಟನೆ