ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ ಬಿ.ವಿಜಯೇಂದ್ರ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ನಂತರ ಬಿಜೆಪಿ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದರು.
ಈ ವೇಳೆ ಹೃತೀಕ್ಷಾ ಕುಟುಂಬದವರು ನಮಗೆ ಹಣ ಬೇಡ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದರು. ಬಳಿಕ ಕುಟುಂಬದವರನ್ನು ಸಮಾಧಾನಪಡಿಸಿದ ಬಿ.ವಿಜಯೇಂದ್ರ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಹಾಗೂ ಮುಖಂಡರು ನಿಮ್ಮ ದುಃಖದಲ್ಲಿ ನಾವು ಭಾಗಿಗಳಾಗಿದ್ದೇವೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಿ ಎಂದು ಸಲಹೆ ನೀಡಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಸಿದ್ದರಾಮಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜೈರಾಮ್, ಇಂಡವಾಳು ಸಚ್ಚಿದಾನಂದ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸಿ. ಕೆ.ಸತೀಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಕೆಂಪಬೋರಯ್ಯ, ಎಂ.ಸತೀಶ್, ಮಹಿಳಾ ಘಟಕದ ಶ್ವೇತ, ರಂಜಿತಾ, ಕಾಂತಮಣಿ, ಜಿಪಂ ಮಾಜಿ ಸದಸ್ಯ ಸಾದೊಳಲು ಕೃಷ್ಣೇಗೌಡ, ಮನು, ಡಾಬಾ ಕಿಟ್ಟಿ ಸೇರಿದಂತೆ ಹಲವು ಮುಖಂಡರುಗಳು ಇದ್ದರು.ಇಂದು ಶಾಸಕ ಕೆ.ಎಂ.ಉದಯ್ 51ನೇ ಜನ್ಮದಿನೋತ್ಸವ ಆಚರಣೆ