ಬಾಬಾಸಾಹೇಬರ ಚಿಂತನೆ ಸರ್ವಕಾಲೀಕ: ಪ್ರೊ. ಡಾಣಿ

KannadaprabhaNewsNetwork |  
Published : Apr 16, 2026, 02:15 AM IST
15ಕೆಪಿಎಲ್22ಎ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ | Kannada Prabha

ಸಾರಾಂಶ

ಅಂಬೇಡ್ಕರ್ ಸಮಾನತೆ, ಶಿಕ್ಷಣ, ಮಹಿಳಾ ಹಕ್ಕು ಹಾಗೂ ಕಾರ್ಮಿಕರ ಕಲ್ಯಾಣ ಕನಸುಗಳಾಗಿದ್ದವು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಸಮಾಜದಲ್ಲಿ ಮೇಲು ಕೀಳು ಮತ್ತು ಬಡವ,ಶ್ರೀಮಂತ ಎಂಬ ತಾರತಮ್ಯ ಮನೋಭಾವ ಅಳಿಯಬೇಕು ಎನ್ನುವ ಬಾಬಾ ಸಾಹೇಬರ ಚಿಂತನೆ ಸರ್ವಕಾಲೀಕ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ವಿ ಡಾಣಿ ಹೇಳಿದರು.

ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಸಮಾನತೆ, ಶಿಕ್ಷಣ, ಮಹಿಳಾ ಹಕ್ಕು ಹಾಗೂ ಕಾರ್ಮಿಕರ ಕಲ್ಯಾಣ ಕನಸುಗಳಾಗಿದ್ದವು. ಪ್ರತಿಯೊಬ್ಬರೂ ಇವುಗಳ ಮಹತ್ವ ಅರಿತು ನಡೆಯಬೇಕು. ಸ್ವಾತಂತ್ರ‍್ಯ ಪೂರ್ವದಲ್ಲಿದ್ದ ಅನಿಷ್ಟ ಪದ್ಧತಿಗಳ ನಡುವೆ ಕಠಿಣ ಶ್ರಮ ವಹಿಸಿ ಓದಿ ಶಿಕ್ಷಣ ಪಡೆದು ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ಜನ ಸಾಮಾನ್ಯರಲ್ಲಿ ಸ್ವಾಭಿಮಾನ, ಶಿಕ್ಷಣ, ಹೋರಾಟದ ಪ್ರಜ್ಞೆ ಮೂಡಿಸುವಲ್ಲಿ ಅಂಬೇಡ್ಕರ್‌ ಅಗ್ರಗಣ್ಯರು ಎಂದು ನುಡಿದರು.

ಕುಲಸಚಿವ ಪ್ರೊ. ಕೆ.ರಮೇಶ ಮಾತನಾಡಿ, ದೇಶಭಕ್ತಿ, ಪ್ರಜಾಪ್ರಭುತ್ವ ಎರಡು ಕಣ್ಣುಗಳು ಇದ್ದ ಹಾಗೇ ಹೋರಾಟ,ಕ್ರಾಂತಿ ಹಾಗೂ ಶಿಕ್ಷಣ ಪ್ರಜಾಪ್ರಭುತ್ವವನ್ನು ರಕ್ಷಿಸುತ್ತವೆ ಎನ್ನುವ ಚಿಂತನೆ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ತಳ ಸಮುದಾಯದವರಿಗಷ್ಟೆ ಅಲ್ಲ ಎಲ್ಲ ಮಾನವರಿಗೂ ಬೇಕಾಗುವ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಪ್ರಾಧ್ಯಾಪಕ ವಿರೇಶ ಉತ್ತಂಗಿ,ಪಾರ್ವತಿ ಕನಕಗಿರಿ, ಪ್ರವೀಣ ಪಾಟೀಲ್, ಪ್ರದರ್ಶನ ಕಲಾ ವಿಭಾಗದ ಅನಂತ ಕುಮಾರ ದೊರೆ,ರಾಜ್ಯಶಾಸ್ತ್ರ ವಿಭಾಗದ ಮೌಲಾಸಾಬ್,ಮಂಜುನಾಥ ಪೂಜಾರ, ಪತ್ರಿಕೋದ್ಯಮ ವಿಭಾಗದ ಸೃಷ್ಠಿ ಕಾವಳ್ಕರ್,ವಾಣಿಜ್ಯಶಾಸ್ತ್ರ ವಿಭಾಗದ ಅಲ್ತಾಫ್ ಹುಸೇನ್,ಅರ್ಥಶಾಸ್ತ್ರ ವಿಭಾಗದ ನಾಗರಾಜ್ ಹಾಗೂ ಎಲ್ಲ ವಿಭಾಗಗಳ ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮವೇ ಪ್ರಪಂಚಕ್ಕೆ ಆಧಾರ ನಮ್ಮದು ಮಾತ್ರ ಧರ್ಮ ಉಳಿದವು ಮತಗಳು: ವಿಧುಶೇಖರ ಶ್ರೀಗಳು
ಲ್ಯಾಂಡ್ ಜಿಹಾದ್: ಪ್ರಮೋದ್ ಮುತಾಲಿಕ್ ಆಕ್ರೋಶ