ಸಾಮಾಜಿಕ ನ್ಯಾಯದ ಹರಿಕಾರ ಬಾಬುಜಗಜೀವನ್ ರಾಮ್

KannadaprabhaNewsNetwork |  
Published : Jul 07, 2026, 01:30 AM IST
ಕೆ ಕೆ ಪಿ ಸುದ್ದಿ 01: ಬಾಬು ಜಗಜೀವನರಾಂ ಜಯಂತಿ.  | Kannada Prabha

ಸಾರಾಂಶ

ಕನಕಪುರ: ದೇಶದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಕಾಲ ಕೇಂದ್ರ ಸಚಿವರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಹೆಗ್ಗಳಿಕೆ ಬಾಬು ಜಗಜೀವನ್ ರಾಮ್ ಅವರದ್ದಾಗಿದೆ ಎಂದು ಕೆಪಿಸಿಸಿ ಸಂಯೋಜಕ ನೀಲಿ ರಮೇಶ್ ತಿಳಿಸಿದರು

ಕನಕಪುರ: ದೇಶದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಕಾಲ ಕೇಂದ್ರ ಸಚಿವರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಹೆಗ್ಗಳಿಕೆ ಬಾಬು ಜಗಜೀವನ್ ರಾಮ್ ಅವರದ್ದಾಗಿದೆ ಎಂದು ಕೆಪಿಸಿಸಿ ಸಂಯೋಜಕ ನೀಲಿ ರಮೇಶ್ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಬಾಬು ಜಗಜೀವನ್ ರಾಮ್ ಅವರ 40ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಭಾರತದ ಮಾಜಿ ಉಪ ಪ್ರಧಾನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಾ ಬಾಬು ಜಗಜೀವನ್ ರಾಮ್ ಶೋಷಿತರ, ದಲಿತರ ಹಾಗೂ ದಮನಿತರ ಹಕ್ಕುಗಳಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟವರು ಎಂದರು.

ದೇಶದ ಸ್ವಾತಂತ್ರ್ಯ ಹೋರಾಟ, ಸಾಮಾಜಿಕ ಸುಧಾರಣೆ ಹಾಗೂ ಆಧುನಿಕ ಭಾರತದ ನಿರ್ಮಾಣದಲ್ಲಿ ಅವರ ಕೊಡುಗೆ ಅನನ್ಯ. ಬಾಬೂಜಿಯವರು ಬಾಲ್ಯದಿಂದಲೇ ಜಾತಿ ತಾರತಮ್ಯದ ಕಹಿ ಉಂಡವರಾಗಿದ್ದರು. ಇದರಿಂದಾಗಿ ಅವರು ದಲಿತರು ಮತ್ತು ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ 1935ರಲ್ಲಿ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸಿದರು. ಶೋಷಿತ ವರ್ಗದವರಿಗೆ ಸಮಾಜದಲ್ಲಿ ಸಮಾನ ಗೌರವ ಸಿಗುವಂತೆ ಮಾಡಲು ಐದು ದಶಕಗಳ ಕಾಲ ನಿರಂತರ ಶ್ರಮಿಸಿದರು. ಆಹಾರ ಮತ್ತು ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ಆಧುನಿಕ ಕೃಷಿ ಪದ್ಧತಿಯನ್ನು ಜಾರಿಗೆ ತಂದು ದೇಶವನ್ನು ಆಹಾರ ಸ್ವಾವಲಂಬಿಯನ್ನಾಗಿಸಿದರು. ಇದೇ ಕಾರಣಕ್ಕೆ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯುವರು ಎಂದರು.

ದೇಶದ ಕಾರ್ಮಿಕ ಸಚಿವರಾಗಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕಾನೂನುಗಳನ್ನು ರೂಪಿಸಿದ ಹೆಗ್ಗಳಿಕೆ, ಉಪ ಪ್ರಧಾನಿಯಾಗಿ ದೇಶ ಮುನ್ನಡೆಸಿದ ಅವರ ಆದರ್ಶಗಳು ನಮಗೆ ಸದಾ ಪ್ರೇರಣೆ. ದೇಶದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ಸಲುವಾಗಿ ಈ ದಿನವನ್ನು ಸರ್ಕಾರ ಸಮತಾ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ಮನೋಹರ್, ತಾಪಂ ಇಒ ಅವಿನಾಶ್, ಸಮಾಜ ಕಲ್ಯಾಣ ಅಧಿಕಾರಿ ಜಯಪ್ರಕಾಶ್, ಎ.ಒ.ಬಾಬು ಹೊಸದುರ್ಗ, ಚೆಲುವರಾಜು ಶಿವನಹಳ್ಳಿ, ಶಿವಲಿಂಗಯ್ಯ, ಕನಕಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ವೆಂಕಟಪ್ಪ, ಸಮುದಾಯದ ಮುಖಂಡರಾದ ಮಾಲಕೊಂಡಯ್ಯಕೋಟೆ ಮಂಜುನಾಥ್, ಕುರುಪೇಟೆ ಶಿವಕುಮಾರ್, ಮೆಳೆಕೋಟೆ ಕುಮಾರ್, ನರಸಿಂಹ ಹಲಸೂರು, ವಿಕ್ರಂ ಜೀವನ್ ಹಾಗೂ ಸಿಬ್ಬಂದಿ ವರ್ಗ ಮತ್ತು ಸಮುದಾಯದ ಮುಖಂಡರು ಹಾಜರಿದ್ದರು.

ಕೆ ಕೆ ಪಿ ಸುದ್ದಿ 01: ಬಾಬು ಜಗಜೀವನರಾಂ ಜಯಂತಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

3000ಕ್ಕೂ ಅಧಿಕ ಪಿಂಚಣಿ ಕಾರ್ಡ್ ರದ್ದುಗೊಳಿಸಿ ವಂಚನೆ: ನವೀನ್
ರಾಷ್ಟ್ರದ ಹಿತದೃಷ್ಟಿಯಿಂದ ಎಸ್‌ಐಆರ್ ಅಭೂತಪೂರ್ವ ಕಾರ್ಯಕ್ರಮ