ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಹಸಿರು ಕ್ರಾಂತಿಯ ಹರಿಕಾರ
ದೇಶದಲ್ಲಿ ಆಹಾರಕ್ಕಾಗಿ ಹಾಹಾಕಾರ ಉಂಟಾದಾಗ ಹಸಿರು ಕ್ರಾಂತಿಯನ್ನು ಹುಟ್ಟು ಹಾಕಿದರು.ಸಂವಿಧಾನ ರಚನಾ ಸಭೆಯಲ್ಲಿ ಅವರು ದಲಿತರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು ಮತ್ತು ಚುನಾಯಿತ ಸಂಸ್ಥೆಗಳು ಹಾಗೂ ಸರ್ಕಾರಿ ಸೇವೆಗಳಲ್ಲಿ ಜಾತಿಯ ಆಧಾರದ ಮೇಲೆ ಸಕಾರಾತ್ಮಕ ಕ್ರಮಕ್ಕಾಗಿ ವಾದಿಸಿದ್ದರು. ಬಾಬು ಜಗಜೀವನರಾಮ್ ಸೃಷ್ಟಿಸಿದ ಹರಿಸು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಹಸಿರು ಕ್ರಾಂತಿಯು ಹರಿಕಾರ ಬಾಬೂಜಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆಯಿಲ್ಲ ಎಂದರು.ಸಮಾಜ ಕಲ್ಯಾಣಾಧಿಕಾರಿ ಅಂಜಲಿ ಮಾತನಾಡಿ ಜಗಜೀವನರಾಮ್ ಅಧಿಕಾರ ಮತ್ತು ಆಸ್ತಿಯಿಂದಗಳಿಸಲಾಗದ ಕೀರ್ತಿಯನ್ನು ಸೇವೆ ಹಾಗೂ ತ್ಯಾಗದಿಂದಗಳಿಸಬಹುದೆಂದು ಜಗಜೀವನರಾಮ್ ಬದುಕು ತಿಳಿಸುತ್ತದೆ, ನಿಸ್ವಾರ್ಥ ಸೇವೆ ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದ ಸಮಾಜಕ್ಕೆ ಆದರ್ಶಪ್ರಾಯವ್ಯಕ್ತಿಯಾಗಿದ್ದಾರೆ. ಅವರ ೩ದಶಕಗಳ ಕಾಲ ಕೇಂದ್ರ ಮಂತ್ರಿ ಮಂಡಲದ ಸದಸ್ಯರಾಗಿ ಅಪಾರ ಆಡಳಿತ ಅನುಭವಗಳಿಸಿದರು. ಸಾರಿಗೆ, ಆಹಾರ, ರೈಲ್ವೆ, ಕೃಷಿ ಮತ್ತು ಸಮುದಾಯ ಅಭಿವೃದ್ದಿಗೆ ಶ್ರಮಿಸಿದ ಧೀಮಂತ ವ್ಯಕ್ತಿ ಎಂದರು.ಈ ವೇಳೆ ತೋಟಗಾರಿಗೆ ಅಧಿಕಾರಿ ಶಿವಾರೆಡ್ಡಿ,ಲೋಕೋಪಯೋಗಿ ಎಇಇ ರವಿ, ಬಿಸಿಎಂ ಅಧಿಕಾರಿ ಶ್ರೀನಿವಾಸ್,ಬಿಸಿಯೂಟ ಅಧಿಕಾರಿ ಯುವರಾಜು,ದಲಿತ ಮುಖಂಡರಾದ ಸೂಲಿಕುಂಟೆ ಆನಂದ್,ಹುಣಸನಹಳ್ಳಿ ವೆಂಕಟೇಶ್,ವಿಎಸ್ಎಸ್ಎನ್ ಅಧ್ಯಕ್ಷ ಅ.ನಾ.ಹರೀಶ್ ಇತರರು ಇದ್ದರು.