ಕನ್ನಡಪ್ರಭ ವಾರ್ತೆ ದಾವಣಗೆರೆ
ತಾಲೂಕಿನ ಅಣಜಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು ಎಂದರು.
ದೇಶದ ಜನರು ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ‘ಜೈಜವಾನ್ ಜೈ ಕಿಸಾನ್’ ಎಂಬ ಸಂದೇಶದೊಂದಿಗೆ ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದ ಪರಿಣಾಮ ಇವತ್ತು ಇವತ್ತು ದೇಶದ ಎಲ್ಲಾ ಗೋದಾಮುಗಳಲ್ಲಿ ದವಸ ಧಾನ್ಯಗಳು ಸಂಗ್ರಹವಾಗಿ ಆಹಾರದ ಕೊರತೆ ನೀಗಿಸಿದೆ. ಇದು ಡಾ.ಬಾಬು ಜಗಜೀವನರಾಂ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಅವರು ಕೊಟ್ಟ ಕೊಡುಗೆಯಾಗಿದೆ. ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ಮಕ್ಕಳು, ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.ಬೇರೆ ದೇಶಗಳಲ್ಲಿ ಆಹಾರಕ್ಕಾಗಿ ಪರದಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಆದರೆ ನಮ್ಮ ದೇಶದಲ್ಲಿ ಇನ್ನು ಹತ್ತು ವರ್ಷ ಆಹಾರದ ಕೊರತೆಯಾದರೆ ಅದನ್ನು ನಿಭಾಯಿಸುವಷ್ಟು ಶಕ್ತಿ ನಮಗೆ ಇದೆ ಎಂದರು.
ದಿಶಾ ಸಮಿತಿ ಸದಸ್ಯರಾದ ಎಸ್.ಕೆ.ಚಂದ್ರಣ್ಣ, ಆಲೂರು ಸೋಮಣ್ಣ, ಗಿರಿಯಾಪುರ ಕೃಷ್ಣಮೂರ್ತಿ, ಬಸಣ್ಣ, ಅಣಜಿ ರಾಜಪ್ಪ, ಪ್ರಾಂಶುಪಾಲ ಮುದೋಬ ನಾಯಕ್, ಶಾಲಾ ಸಿಬ್ಬಂದಿ, ಗ್ರಾಮಸ್ಥರು ಹಾಜರಿದ್ದರು.