ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಭಾನುವಾರ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ ಮೂಲಕ ಗೌರವ ಸಮರ್ಪಣೆ ಸಲ್ಲಿಸಿ ಮಾತನಾಡಿದರು.
ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸಲು, ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆ. ಸಮುದಾಯ ಭವನ ಮತ್ತು ಪ್ರತಿಮೆಯನ್ನು ಸ್ಥಾಪಿಸುವ ಕೆಲಸವನ್ನು ಬಹಳ ವೇಗವಾಗಿ ಮಾಡಬೇಕಿದೆ. ಐದು ಎಕರೆ ಜಾಗವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳವರು ಮುಂಚೂಣಿಯಲ್ಲಿ ಇರಲಿಲ್ಲ. ಶೋಷಿತ ಸಮುದಾಯದ ಜನರು ಹೆಚ್ಚಾಗಿ ಮುಂಚೂಣಿಯಲ್ಲಿದ್ದರು, ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿದ್ದರು. ಸ್ವಾತಂತ್ರ್ಯ ನೀಡುವುದಾದರೆ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಬಾಬು ಜಗಜೀವನ್ ರಾಮ್ ಅವರು ಧೈರ್ಯವಾಗಿ ಹೇಳಿದ್ದನ್ನು ನಾವೆಲ್ಲ ಸ್ಮರಿಸಬೇಕು ಎಂದರು.
ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು, ಒಂದೊತ್ತಿನ ಊಟ ಕಡಿಮೆಯಾದರು ಪರವಾಗಿಲ್ಲ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ, ಇದರಿಂದ ಮುಂದಿನ ಪೀಳಿಗೆಯ ಜೀವನ ಬದಲಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನಮ್ಮ ಮಕ್ಕಳನ್ನು ತಯಾರು ಮಾಡಬೇಕು ಎಂದು ಹೇಳಿದರು. ದೇಶದಲ್ಲಿರುವ ಜಾತಿ ಸಂಘಗಳು ಹೊರ ದೇಶಗಳಲ್ಲಿ ಹುಟ್ಟಿಕೊಂಡಿವೆ. ಅಲ್ಲಿಯೂ ಜಾತಿ ಸಮ್ಮೇಳನ ನಡೆಯುತ್ತಿವೆ ಎಂದು ಬೇಸರಿಸಿದರು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಹಿಂದಿನ ಸರ್ಕಾರ ಯಾವ ರೀತಿ ದಾರಿ ತಪ್ಪಿಸಿದರು ಎಂಬುದು ನಮಗೆ ಗೊತ್ತಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜಿ, ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.