ಬಕ್ರೀದ್ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ: ಡಾ.ಕುಮಾರ

KannadaprabhaNewsNetwork |  
Published : May 26, 2026, 01:45 AM IST
20 | Kannada Prabha

ಸಾರಾಂಶ

ಸಮಾಜದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಬದುಕಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಾತಿ, ಮತ ಭೇದವಿಲ್ಲದೆ ಪರಸ್ಪರ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ವಿವಿಧ ಸಮಾಜದ ಮುಖಂಡರಿಗೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಮಾತನಾಡಿ, ಸಮಾಜದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಬದುಕಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

ಹಬ್ಬದ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಜಿಲ್ಲೆಗೆ ಯಾವುದೇ ಕಪ್ಪು ಚುಕ್ಕಿ ಬಾರದಂದೆ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಗಳಿಂದ ಆಚರಿಸೋಣ. ಒಂದು ವೇಳೆ ಶಾಂತಿಗೆ ಭಂಗ ತರುವ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ.ಶೋಭಾರಾಣಿ ಮಾತನಾಡಿ, ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿವಿಧ ಸಂಘಟನೆಗಳ ಮುಖಂಡರು ಸಲಹೆಗಳನ್ನು ನೀಡಿದ್ದೀರಿ. ಅದರಂತೆ ಎಲ್ಲ ರೀತಿಯ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸುರಕ್ಷಿತೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ-ಮುಸ್ಲಿಂ ಧರ್ಮಗಳ ಮುಖಂಡರು ಮಾತನಾಡಿ, ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಡಿವೈಎಸ್ಪಿ ಲಕ್ಷ್ಮೀ ನಾರಾಯಣ ಪ್ರಸಾದ್, ಜಿಲ್ಲೆಯ ಮುಸ್ಲಿಂ ಮತ್ತು ಹಿಂದೂ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ: ಮಧು
ಬಾಗೇಪಲ್ಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ