ತಾಲೂಕಿನಲ್ಲಿ ಅಕ್ರಮ ಚಟುವಟಿಕೆನಿಯಂತ್ರಣಕ್ಕೆ ಬಾದರ್ಲಿ ಒತ್ತಾಯ

KannadaprabhaNewsNetwork |  
Published : Aug 23, 2026, 01:30 AM IST
21ಕೆಪಿಎಸ್ಎನ್ಡಿ3: ಎಂಎಲ್ಸಿ ಬಸನಗೌಡ ಬಾದರ್ಲಿ | Kannada Prabha

ಸಾರಾಂಶ

ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇವುಗಳ ಕಡಿವಾಣಕ್ಕೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇವುಗಳ ಕಡಿವಾಣಕ್ಕೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತಿದರು.

ತಾಲ್ಲೂಕಿನಲ್ಲಿ ಡ್ರಗ್ಸ್, ಗಾಂಜಾ, ಮಟ್ಕಾ, ಇಸ್ಪೀಟ್, ಅಕ್ರಮ ಮರಳು ಸಾಗಾಟ ಹಾಗೂ ಆನ್ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ಇದುವರೆಗೆ ನೂರಾರು ಪ್ರಕರಣಗಳು ದಾಖಲಾಗಿವೆ ಎಂದ ಅವರು, ಪ್ರಕರಣಗಳಲ್ಲಿ ಭಾಗಿ ಯಾಗಿರುವ ಆರೋಪಿಗಳ ವಿರುದ್ಧ ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಇದುವರೆಗೆ ಎಷ್ಟು ಪ್ರಮಾಣದ ಡ್ರಗ್ಸ್ ಹಾಗೂ ಗಾಂಜಾವನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿ ಕೊಂಡ ಮಾದಕ ವಸ್ತುಗಳನ್ನು ಎಲ್ಲಿ ಮತ್ತು ಯಾವ ಇಲಾಖೆಯ ವಶದಲ್ಲಿ ಶೇಖರಿಸಿಡಲಾಗಿದೆ. ಅಕ್ರಮ ಚಟುವಟಿಕೆಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲ ನೀಡುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಇದುವರೆಗೆ ಯಾವುದೇ ಇಲಾಖಾ ಅಥವಾ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಎಂದು ದೂರಿದರು.

ವಿಶೇಷವಾಗಿ ಯುವಜನರನ್ನು ಮಾದಕ ವ್ಯಸನ ಮತ್ತು ಆನ್ಲೈನ್ ಜೂಜಾಟದಂತಹ ಅಪಾಯಕಾರಿ ಚಟುವಟಿಕೆಗಳಿಂದ ದೂರವಿಡುವುದು ಅತ್ಯಂತ ಅಗತ್ಯವಾಗಿದ್ದು, ಸಿಂಧನೂರು ತಾಲ್ಲೂಕಿನಲ್ಲಿ ಪೆÇಲೀಸ್ ಗಸ್ತು, ಗುಪ್ತಚರ ಹಾಗೂ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಜನರಿಗೆ ಸುರಕ್ಷಿತ ಹಾಗೂ ಶಾಂತಿಯುತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿತ್ತಲ ಕೋಳಿ ಸಾಕಾಣಿಕೆಯಿಂದ ಸುಸ್ಥಿರ ಜೀವನ
ಕ್ರೀಡೆಯಿಂದಲೂ ಸಾಧನೆ ಮಾಡಬಹುದು: ಪಾಪಣ್ಣ