ಬಾಲಕರಲ್ಲಿ ಬಾಗಲಕೋಟೆ, ಬಾಲಕಿಯರ ವಿಭಾಗದಲ್ಲಿ ಉಡುಪಿ ತಂಡ ಪ್ರಥಮ

KannadaprabhaNewsNetwork |  
Published : Dec 17, 2024, 01:00 AM IST
16ುಲು1,2 | Kannada Prabha

ಸಾರಾಂಶ

ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಕ್ರೀಡಾಕೂಟ ಬೇತಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು.

ಗಂಗಾವತಿಯಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಕ್ರೀಡಾಕೂಟ । ಪ್ರಶಸ್ತಿ ವಿತರಿಸಿದ ಡಿಡಿಪಿಯು

ಕನ್ನಡಪ್ರಭ ವಾರ್ತೆ ಗಂಗಾವತಿ

ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಪ್ಪಳ ಹಾಗೂ ಬೇತಲ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಗಂಗಾವತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಕ್ರೀಡಾಕೂಟ ಬೇತಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಜಿ.ಎಚ್., ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಸೋಲು ಗೆಲುವು ಅನ್ನುವುದಕ್ಕಿಂತ ಪ್ರತಿನಿಧಿಸುವುದು ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಬೇತಲ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ ರಾಜು, ಕಾರ್ಯದರ್ಶಿ ಬ್ಯಾಬೇಜ್ ಮಿಲ್ಟನ್, ಆಡಳಿತಾಧಿಕಾರಿ ಹೇಮಾ , ಜಿಲ್ಲಾ ಕ್ರೀಡಾ ಸಂಯೋಜಕ ತಿರುಪತಿ ನಾಯಕ ಉಪಸ್ಥಿತರಿದ್ದರು.

ವಿಜೇತರು-ಬಾಲಕರ ವಿಭಾಗ:

ಬಾಲಕರ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲೆ ಪ್ರಥಮ, ರಾಮನಗರ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗ:

ಬಾಲಕಿಯರ ವಿಭಾಗದಲ್ಲಿ ಉಡುಪಿ ಪ್ರಥಮ, ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ) ದ್ವಿತೀಯ ಸ್ಥಾನ ಪಡೆದುಕೊಂಡಿತು.

ಈ ಕ್ರೀಡಾಕೂಟದಲ್ಲಿ ಬಾಲಕರ ತಂಡ 27 (162 ಕ್ರೀಡಾಪಟುಗಳು), ಬಾಲಕಿಯರ ತಂಡ 21(126 ಕ್ರೀಡಾಪಟುಗಳು) ಭಾಗವಹಿಸಿದ್ದರು.

ತಂಡದ ವ್ಯವಸ್ಥಾಪಕರಾಗಿ 48 ಜನ ಭಾಗವಹಿಸಿದ್ದು, ಕ್ರೀಡಾ ನಿರ್ಣಾಯಕರಾಗಿ 12 ಜನ, ದೈಹಿಕ ಶಿಕ್ಷಣ ಉಪನ್ಯಾಸಕರು 13 ಜನ ಒಟ್ಟು 361 ಕ್ರೀಡಾಪಟುಗಳು ಸೇರಿದಂತೆ ತಂಡದ ವ್ಯವಸ್ಥಾಪಕರು, ಕ್ರೀಡಾಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

೨೩ರಂದು ಜಿ ರಾಮ್ ಜೀ ವಿರೋಧಿಸಿ ಪ್ರತಿಭಟನಾ ಪೂರ್ವಭಾವಿ ಸಭೆ
ಸರ್ವಜ್ಞ ಕವಿಯ ತ್ರಿಪದಿಗಳು ಜನರ ಜೀವನಕ್ಕೆ ದಾರಿದೀಪ