ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧಿಸಿದ ಬಾಗೇಪಲ್ಲಿ ಪೊಲೀಸರು

KannadaprabhaNewsNetwork |  
Published : Oct 17, 2025, 01:00 AM IST
16ಬಿಜಿಪಿ1 | Kannada Prabha

ಸಾರಾಂಶ

ತಾನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಅರಕುವ್ಯಾಲಿ ಎಂಬ ಊರಿನಿಂದ ತೆಗೆದುಕೊಂಡು ಬಂದು ಗೂಳೂರು, ಬಾಗೇಪಲ್ಲಿ ಮತ್ತು ಇತರೆ ಕಡೆಗಳಲ್ಲಿ ಕಾನೂನು ಬಾಹೀರವಾಗಿ ಮಾರಾಟ ಮಾಡುತ್ತಿರುವುದಾಗಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದು, ಮಾಲು ಸಮೇತ ವಶಕ್ಕೆ ಪಡೆದ ಬಾಗೇಪಲ್ಲಿ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ.

ಬಾಗೇಪಲ್ಲಿ: 1. 25 ಲಕ್ಷ ರು. ಮೌಲ್ಯದ 2.5 ಕೇಜಿ ಗಾಂಜಾವನ್ನು ವಶಕ್ಕೆ ಪಡೆದು ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗೂಳೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ವ್ಯಕ್ತಿ ಪಟ್ಟಣದ ಸಾಯಿ ದೀಪಕ್ ಎಂಬುದಾಗಿ ತಿಳಿದಿದೆ.

ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಬಾಗೇಪಲ್ಲಿ ಪೊಲೀಸರು ಗೂಳೂರು ನಿಡುಮಾಮಿಡಿ ಮಠದ ಬಳಿ ಗಸ್ತಿನಲ್ಲಿದ್ದಾಗ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಬಟ್ಟೆ ಬ್ಯಾಗ್ ಹಿಡಿದು ನಿಂತಿದ್ದು, ಪೊಲೀಸರನ್ನು ಕಂಡು ಓಡಿಹೋಗಲು ಪ್ರಯತ್ನಿಸಿದ್ದಾನೆ. ಪೊಲೀಸರು ಆತನನ್ನು ಸುತ್ತುವರೆದು ವಿಚಾರಣೆ ಮಾಡಿದಾಗ ಆತನ ಬಳಿ ಇರುವ ಬ್ಯಾಗ್ನಲ್ಲಿ ಸುಮಾರು 2.5 ಕೇಜಿಯಷ್ಟು ಗಾಂಜಾ ಇರುವುದು ತಿಳಿದಿದೆ.

ತಾನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಅರಕುವ್ಯಾಲಿ ಎಂಬ ಊರಿನಿಂದ ತೆಗೆದುಕೊಂಡು ಬಂದು ಗೂಳೂರು, ಬಾಗೇಪಲ್ಲಿ ಮತ್ತು ಇತರೆ ಕಡೆಗಳಲ್ಲಿ ಕಾನೂನು ಬಾಹೀರವಾಗಿ ಮಾರಾಟ ಮಾಡುತ್ತಿರುವುದಾಗಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದು, ಮಾಲು ಸಮೇತ ವಶಕ್ಕೆ ಪಡೆದ ಬಾಗೇಪಲ್ಲಿ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ.

ಎಸ್ ಪಿ ಕುಶಾಲ್ ಚೌಕ್ಸಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗನ್ನಾಥ ರೈ ಮತ್ತು ಚಿಕ್ಕಬಳ್ಳಾಪುರ ಉಪ- ವಿಭಾಗದ ಪೊಲೀಸ್ ಉಪಾಧೀಕ್ಷಕ ಶಿವಕುಮಾರ್ ರ ಮಾರ್ಗದರ್ಶನದಲ್ಲಿ ಬಾಗೇಪಲ್ಲಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರಶಾಂತ್ ಆರ್. ವರ್ಣಿಯವರ ಸಾರಥ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ (ಅಪರಾಧ ವಿಭಾಗ) ಮುನಿರತ್ನಂ ಪಿ. ಮತ್ತು ಪಿಎಸ್ಐ ಸುನೀಲ್ ಕುಮಾರ್ ಹಾಗೂ ಸಿಬ್ಬಂದಿ ಸುರೇಶ್, ಧನಂಜಯ್ ಕುಮಾರ್, ಸಾಗರ್, ವೆಂಕಟಶಿವ, ಕೃಷ್ಣಪ್ಪ , ಶಂಕರಪ್ಪ , ರಾಜಪ್ಪರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ