ವಿನಯ ಕುಲಕರ್ಣಿಗೆ ಜಾಮೀನು: ಧಾರವಾಡದಲ್ಲಿ ವಿಜಯೋತ್ಸವ

KannadaprabhaNewsNetwork |  
Published : Aug 01, 2026, 02:00 AM IST
ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. | Kannada Prabha

ಸಾರಾಂಶ

ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.

ನಗರದ ಹೆಬ್ಬಳ್ಳಿ ಅಗಸಿಯಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಘೋಷಣೆ ಕೂಗುವ ಮೂಲಕ ವಿಜಯೋತ್ಸವ ಆಚರಿಸಲಾಯಿತು. ಮುಖಂಡರಾದ ಶಿವಶಂಕರ ಹಂಪಣ್ಣವರ, ದೀಪಾ ನೀರಲಕಟ್ಟಿ, ಸೂರವ್ವ ಪಾಟೀಲ, ದಿಲ್ ಶಾದ್ ಬೇಗಂ ನದಾಫ, ಗೌರಮ್ಮ ಕುರುಬರ, ಪ್ರಕಾಶ ಬಾವಿಕಟ್ಟಿ, ಆನಂದ ಸಿಂಗನಾಥ, ಫಯಾಜ ಬಸ್ತವಾಡ, ಗೀರಿಶ ಕಲ್ಲಾಪೂರ, ಶ್ರೀಶೈಲ ಬಾವಿಕಟ್ಟಿ, ಪ್ರಕಾಶ ಪಟ್ಟಣಶೆಟ್ಟಿ ಮತ್ತಿತರರು ಇದ್ದರು.

ಹಾಗೆಯೇ, ವಿನಯ ಕುಲಕರ್ಣಿ ಅಭಿಮಾನಿ ಬಳಗದಿಂದ ನಗರದ ಗಾಂಧಿಚೌಕ್‌ನಲ್ಲಿ ಸಾವಿರ ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಮಾಡಲಾಯಿತು. ಬಸವರಾಜ ಜಾಧವ, ಪ್ರಶಾಂತ್ ಕೇಕರೆ, ಗೌರಮ್ಮ ಬೋಲೋಗಿ, ನಾರಾಯಣ ಸುಳ್ಳೋರ, ವಿರೂಪಾಕ್ಷ ವಕ್ಕುಂದ, ಹಿದಾಯತ್ ರಾಯಚೂರು, ಬಾಬು ಜಾದವ್, ಶಿವಾಜಿ ಮಟ್ಟಿ, ಮನಿ ಖಲಂದರ್ ಜಾಗೀರ್ದಾರ, ಮಂಜುನಾಥ ಮಾನೆ, ವಿನಾಯಕ್ ಕಟಿಗೆನ್ನವರ್ ಇದ್ದರು.

ನ್ಯಾಯವನ್ನು ಎತ್ತಿ ಹಿಡಿದ ನ್ಯಾಯಾಂಗಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಕೃತಜ್ಞತೆ

ಈ ಪಯಣದಲ್ಲಿ ನಮ್ಮೊಂದಿಗೆ ಅಚಲವಾದ ನಂಬಿಕೆ ಮತ್ತು ಬೆಂಬಲದೊಂದಿಗೆ ನಿಂತ ನಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಯೊಬ್ಬ ಬೆಂಬಲಿಗರಿಗೂ ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇವೆ. ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಬೆಂಬಲ ನಮಗೆ ಅಮೂಲ್ಯವಾಗಿದೆ ಎಂದು ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ವಿನಯ ಕುಲಕರ್ಣಿ ಹೇಳಿದ್ದಾರೆ.

ಸುಪ್ರೀಂನಲ್ಲಿ ನ್ಯಾಯ ಕೇಳ್ತೇವೆ

ಶಾಸಕ ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್‌ನಲ್ಲಿ ಜಾಮೀನು ದೊರೆತಿರಬಹುದು. ಆದರೆ, ನ್ಯಾಯದ ಪರ ಕಾನೂನು ಇದ್ದು, ಸುಪ್ರೀಂಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿ ಅಲ್ಲಿ ನ್ಯಾಯ ಪಡೆಯುತ್ತೇವೆ. ಸದ್ಯ ಯಾವ ಕಾರಣಕ್ಕೆ ಜಾಮೀನು ಮಂಜೂರಾಗಿದೆ ಗೊತ್ತಿಲ್ಲ. ಅದನ್ನು ತಿಳಿದು ಸುಪ್ರಿಂನಲ್ಲಿ ಪ್ರಶ್ನಿಸುತ್ತೇವೆ ಎಂದು ಕೊಲೆಯಾದ ಯೋಗೀಶಗೌಡರ ಸಹೋದರ ಗುರುನಾಥಗೌಡ ಗೌಡರ ಹೇಳಿದ್ದಾರೆ.

ಶಿಕ್ಷೆಯಾಗುವ ವರೆಗೂ ಹೋರಾಟ

ಯೋಗೀಶಗೌಡ ಗೌಡರ ಕೊಲೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವ ವರೆಗೂ ನಮ್ಮ ಹೋರಾಟ ಮಾತ್ರ ನಿಲ್ಲೋದಿಲ್ಲ. ಸದ್ಯ ಹೈಕೋರ್ಟ್‌ ಜಮೀನು ನೀಡಿರುವುದು ನಮಗೂ ಬೇಸರ ತಂದಿದೆ. ಯಾವ ಆಧಾರದ ಮೇಲೆ ಸೆಷೆನ್ಸ್‌ ನ್ಯಾಯಾಲಯದ ತೀರ್ಪು ಅಮಾನತ್ತು ಇಡಲಾಗಿದೆ ಎಂಬುದನ್ನು ಅರಿತು ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆ ಎಂದು ಹೋರಾಟಗಾರ ಬಸವರಾಜ ಕೊರವರ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕೈ ಕಾರ್ಯಕರ್ತರ ವಿಜಯೋತ್ಸವ

ಹುಬ್ಬಳ್ಳಿ: ಮಾಜಿ ಸಚಿವ, ಧಾರವಾಡ ಶಾಸಕ ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್‌ ಜೀವಾವಧಿ ಶಿಕ್ಷೆ ತಡೆ ನೀಡಿ, ಜಾಮೀನು ಮಂಜೂರು ಮಾಡಿರುವುದನ್ನು ಸ್ವಾಗತಿಸಿ ಕಾಂಗ್ರೆಸ್‌ ಯುವ ಸಮಿತಿ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿ ಎದುರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು. ಕುಣಿದು ಕುಪ್ಪಳಿಸಿದರು. ಈ ವೇಳೆ ಅರ್ಜುನ ಪಾಟೀಲ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವೇರಿ: ರಾಜ್ಯದ ಮುಂದಿರುವ ಆಯ್ಕೆ ಬಗ್ಗೆ ತೀವ್ರ ಚರ್ಚೆ
ಇಂದೂ ನಡೆಯಲಿದೆ ಸಂಪುಟ ವಿಸ್ತರಣೆ ಸರ್ಕಸ್‌!