ಕನ್ನಡಪ್ರಭ ವಾರ್ತೆ ಮಂಡ್ಯ
ಬಾನು ಮುಷ್ತಾಕ್ ಅವರು ೨೦೨೩ರಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿ, ಕನ್ನಡ ತಾಯಿಯನ್ನು ಅರಿಶಿನ-ಕುಂಕುಮದಲ್ಲಿ ಅಲಂಕರಿಸಿ, ಧ್ವಜವನ್ನೂ ಅದೇ ಬಣ್ಣದಲ್ಲಿ ಹಾರಿಸುತ್ತಿದ್ದರೆ, ಅಲ್ಪಸಂಖ್ಯಾತಳಾದ ನಾನು ಹೇಗೆ ಅದನ್ನು ಒಪ್ಪಿಕೊಳ್ಳಲಿ ಎನ್ನುವ ಮೂಲಕ ಮತಾಂಧತೆಯ ಸಂದೇಶ ನೀಡಿದ್ದರು. ಅಂತಹವರನ್ನು ಹೇಗೆ ನಮ್ಮ ಧಾರ್ಮಿಕ ಆಚರಣೆಯಲ್ಲಿ ಭಾಗಿಗಳನ್ನಾಗಿ ಮಾಡಲು ಸಾಧ್ಯ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ರಾಜ್ಯ ಸರ್ಕಾರಕ್ಕೆ ಅವರ ಬಗ್ಗೆ ಮೃಧು ಧೋರಣೆ ಇದ್ದರೆ ಅವರನ್ನು ಮುಂದಿನ ವರ್ಷ ಬಳ್ಳಾರಿಯಲ್ಲಿ ನಡೆಯುವ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಅಥವಾ ಕನ್ನಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲಿ, ಅದು ಬಿಟ್ಟು ದಸರಾ ಉತ್ಸವ ನಾಡಿನ ಹಬ್ಬವಾಗಿದ್ದು, ಹಿಂದುಗಳ ಧಾರ್ಮಿಕ ಆಚರಣೆಯಾಗಿದೆ. ೯ ದಿನಗಳು ಅತ್ಯಂತ ಶ್ರದ್ಧೆಯಿಂದ ನವದುರ್ಗೆಯರನ್ನು ಪೂಜಿಸಿ, ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡುತ್ತೇವೆ. ಇಂತಹ ಹಿಂದುಗಳ ಹಬ್ಬದ ಉದ್ಘಾಟನೆಗೆ ಚಾಮುಂಡೇಶ್ವರಿಯ ಬಗ್ಗೆ ಭಕ್ತಿ ಇಲ್ಲದ ಮಹಿಳೆಯನ್ನು ನಿಯೋಜಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ತಾಯಿ ಶ್ರೀ ಚಾಮುಂಡೇಶ್ವರಿ ಬಗ್ಗೆ ಗೌರವವಿದೆ ಎಂದು ಹೇಳಿರುವ ಬಾನು ಮುಷ್ತಾಕ್ ಅವರಿಗೆ ತಾಯಿಯ ಬಗ್ಗೆ ಗೌರವ ಇದೆ ಎನ್ನುತ್ತಾರೆಯೇ ಹೊರತು ಭಕ್ತಿ ಇದೆ ಎಂದು ಹೇಳಲಿಲ್ಲ. ಮೊದಲು ಅವರಿಗೆ ಶ್ರೀ ಚಾಮುಂಡೇಶ್ವರಿ ಬಗ್ಗೆ ಭಕ್ತಿ ಇದೆಯೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.
ಸೇನೆಯ ಪದಾಧಿಕಾರಿಗಳಾದ ಹರ್ಷ, ಚೇತನ್, ಶಿವು, ಶೇಷಾದ್ರಿ, ಸತೀಶ್ ಇದ್ದರು.