ಮಂಗಳೂರು: ಗೋ ಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಎರಡನ್ನೂ ನಾವು ಒತ್ತಾಯಿಸುತ್ತೇವೆ ಎಂದು ವಿಶ್ವ ಹಿಂದು ಪರಿಷತ್ನ ಕೇಂದ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದರು.
ಕರ್ನಾಟಕದಲ್ಲಿ 2020ರಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಅನುಷ್ಠಾನ ಆಗಬೇಕು. ದೇಶದಲ್ಲೂ ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಬೇಕು ಎಂದೂ ನಾವು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.
ಕೇರಳ, ತಮಿಳುನಾಡು ರಾಜ್ಯ ಕರ್ನಾಟಕದ ನೆರೆಯ ರಾಜ್ಯಗಳಾಗಿದ್ದು, ಕೇರಳದಲ್ಲಿ ಗೋ ಹತ್ಯಾ ನಿಷೇಧ ಕಾನೂನು ಇಲ್ಲದಿರುವುದರಿಂದ, ದೊಡ್ಡ ಪ್ರಮಾಣದಲ್ಲಿ ಗೋಕಳ್ಳತನ ನಡೆಯುತ್ತಿದೆ. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.ಕೋಟಿ ಸದಸ್ಯತ್ವ ಗುರಿ:ಬಜರಂಗದಳ ಪ್ರಾಂತ ಸಂಯೋಜಕ್ ಸಮಾವೇಶದಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಬಜರಂಗದಳಕ್ಕೆ ಹೊಸ ಕಾರ್ಯಕರ್ತರ ಜೋಡಿಸುವ ಮೂಲಕ ಸಂಘಟನಾ ವ್ಯಾಪ್ತಿಯನ್ನು ವಿಸ್ತರಿಸುವ ಬಗ್ಗೆ ಚರ್ಚಿಸಲಾಗಿದೆ. ಕಳೆದ ವರ್ಷ ಸಂಘಟನೆ 72 ಲಕ್ಷ ಸದಸ್ಯರನ್ನು ಹೊಂದಿದ್ದು, ಈ ವರ್ಷದ ನವೆಂಬರ್ನಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಒಂದು ಕೋಟಿಗೆ ಸದಸ್ಯರ ಹೊಂದುವ ಗುರಿ ಹೊಂದಿದ್ದೇವೆ. ಆ ಮೂಲಕ ನಮ್ಮ ಹೋರಾಟಗಳನ್ನು ತೀವ್ರವಾಗಿ ನಡೆಸಲಿದ್ದೇವೆ ಎಂದರು.‘ನಶ ಮುಕ್ತ ಭಾರತ’ ಸಂಕಲ್ಪ:
ಲವ್ಜಿಹಾದ್ ಪ್ರಕರಣಗಳು ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಕೇವಲ ಮುಸ್ಲಿಂ ಯುವಕರು ಮಾತ್ರವಲ್ಲದೇ ಮಹಿಳೆಯರು ಕೂಡ ಇದರಲ್ಲಿ ಭಾಗಿಯಾಗುತ್ತಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಇತ್ತೀಚೆಗೆ ಬೆಳಕಿಗೆ ಬಂದ ಪ್ರಮುಖ ಎರಡು ಪ್ರಕರಣಗಳೇ ಸಾಕ್ಷಿ. ಐಟಿ ಕ್ಷೇತ್ರ ಇಂದು ಬೃಹತ್ ಆಗಿ ಬೆಳೆದಿದ್ದು, ಆ ಕ್ಷೇತ್ರದಲ್ಲೂ ಲವ್ಜಿಹಾದ್ ನಂತಹ ಪ್ರಕರಣಗಳು ನಡೆಯುತ್ತಿರುವುದು ಹಿಂದು ಸಮಾಜಕ್ಕೆ ದೊಡ್ಡ ಆಪತ್ತು. ದೂರುಗಳನ್ನೂ ನೀಡಿದರೂ ಕ್ರಮವಹಿಸಿದ ಕಂಪೆನಿಗಳ ಪ್ರಮುಖರನ್ನು ವಿಹಿಂಪ ಮುಂದಿನ ದಿನಗಳಲ್ಲಿ ಭೇಟಿಯಾಗಿ ಚರ್ಚಿಸಲಿದೆ. ಮುಸ್ಲಿಂ ಸಮಾಜ ಈ ಬಗ್ಗೆ ಚಿಂತನೆ ನಡೆಸಬೇಕು. ಕೆಲವೇ ಕೆಲವರಿಂದ ಇಂತಹ ಘಟನೆಗಳು ನಡೆಯುತ್ತಿದೆ ಎನ್ನುವವರಿಗೆ ಮುಂದೆ ಇದು ಇಡೀ ಸಮುದಾಯಕ್ಕೆ ಕಪ್ಪು ಚುಕ್ಕೆಯಾಗಲಿದೆ. ಇದರ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.