ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಪಟ್ಟಣದ ಜಲಾಲೀಯ, ಹನಫಿ ಜಾಮಿಯ, ಕಲ್ಕಂದೂರು, ತಣ್ಣೀರುಹಳ್ಳ, ಹೊಸತೋಟ, ಕಾಗಡಿಕಟ್ಟೆ ಸೇರಿದಂತೆ ಹಲವೆಡೆ ಹಬ್ಬದಾಚರಣೆ ಕಂಡುಬಂದಿತು.
ಸಮೀಪದ ಬಜೆಗುಂಡಿ ಗ್ರಾಮದ ಖೀಳಾರಿಯ ಮಸೀದಿಯಲ್ಲಿ ಬೆಳಗ್ಗೆ ಸಮಾಜಬಾಂಧವರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡುವುದರೊಂದಿಗೆ, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮಸೀದಿ ಗುರುಗಳಾದ ಉಬೈದ್ ಫೈಜಿ ಪ್ರಾರ್ಥನೆಯ ನೇತೃತ್ವ ವಹಿಸಿ, ಪ್ರವಚನ ನಡೆಸಿಕೊಟ್ಟರು.ನಂತರ ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎ. ಯಾಕೂಬ್ ಮಾತನಾಡಿ, ಮಾನವೀಯ ಸಂಬಂಧಗಳನ್ನು ಬೆಸೆಯುವ ಆಶಯಗಳನ್ನು ಎಲ್ಲ ಧರ್ಮಗಳು ಪ್ರತಿಪಾದಿಸಿದೆ ಮತ್ತು ಹಿಂಸೆಯನ್ನು ಕಟುವಾಗಿ ವಿರೋಧಿಸಿದೆ. ಇಸ್ಲಾಂ ಮಾನವೀಯ ಸಂಬಂಧಗಳ ಅಡಿಪಾಯದಲ್ಲಿ ಬೇರೂರಿದೆ. ಈದುಲ್ ಹಬ್ಬ ಕುಟುಂಬ ಸಂಬಂಧಗಳನ್ನು ಅದರ ಮಹತ್ವವನ್ನು ಜಗತ್ತಿಗೆ ನೆನಪಿಸುತ್ತದೆ. ನಾಡಿನಲ್ಲಿ ಶಾಂತಿ ಸೌಹಾರ್ದತೆ ನಾಡು ನಮ್ಮದಾಗಲಿ ಎಂದು ಹೇಳಿದರು.
ಈ ಸಂದರ್ಭ ಮಸೀದಿಯ ಆಡಳಿತ ಮಂಡಳಿ ಉಪಾಧ್ಯಕ್ಷ ಅನೀಫ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಸುಲೈಮಾನ್, ಸಹ ಕಾರ್ಯದರ್ಶಿ ನಿಯಾದ್, ಖಜಾಂಚಿ ಅದ್ರಾಮ ಸೇರಿದಂತೆ ಸಮಾಜಬಾಂಧವರು ಪಾಲ್ಗೊಂಡಿದ್ದರು.