ರಾಮನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತವರು ಬೆಂಗಳೂರು ದಕ್ಷಿಣ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಜಿಲ್ಲೆಯವರೇ ಆದ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಅವರನ್ನು ನೇಮಕ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲು ಸಿದ್ದರಾಮಯ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರದ ಉಸ್ತುವಾರಿ ವಹಿಸಿಕೊಂಡಿದ್ದರು. ಹೀಗಾಗಿ ರಾಮಲಿಂಗಾರೆಡ್ಡಿ ಅವರೇ ಮೂರು ವರ್ಷ ಉಸ್ತುವಾರಿ ಸಚಿವರಾಗಿದ್ದರು.
ಜಿಲ್ಲೆಯ ಮನೆ ಮಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡ ರಾಮಲಿಂಗಾರೆಡ್ಡಿ ಅವರಿಗೆ ಎರಡನೇ ಬಾರಿಗೂ ಜಿಲ್ಲಾ ಉಸ್ತುವಾರಿ ಹೊಣೆ ವಹಿಸಲಾಗಿತ್ತು. ಇದೀಗ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಅಲಂಕರಿಸಿದ ಎಚ್.ಸಿ.ಬಾಲಕೃಷ್ಣ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿದೆ.8ನೇ ಜಿಲ್ಲಾ ಉಸ್ತುವಾರಿ ಸಚಿವ:
ಈ ಮೊದಲು ಬಿಜೆಪಿಯಿಂದ ಶ್ರೀರಾಮುಲು, ಉಮೇಶ್ ಕತ್ತಿ, ರೇಣುಕಾಚಾರ್ಯ, ಬಚ್ಚೇಗೌಡ, ಸಿ.ಪಿ.ಯೋಗೇಶ್ವರ್ ಬಳಿಕ
ಬಾಕ್ಸ್ ....
ಒಂದು ಕಾಲದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಅತ್ಯಂತ ಆಪ್ತ ಬಳಗದಲ್ಲಿ ಬಾಲಕೃಷ್ಣ ಗುರುತಿಸಿಕೊಂಡಿದ್ದರು. ಎಚ್ಡಿಕೆ ಎರಡು ಬಾರಿ ಮುಖ್ಯಮಂತ್ರಿಯಾದರೂ ಈ ಆಪ್ತನಿಗೆ ಸಚಿವ ಸ್ಥಾನ ಕರುಣಿಸಿರಲಿಲ್ಲ. ಬಳಿಕ 2018ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದ ನಾಯಕರಲ್ಲಿ ಬಾಲಕೃಷ್ಣ ಕೂಡ ಒಬ್ಬರು.
ಹೀಗಾಗಿ 2023ರಲ್ಲಿ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆದಾಗಿನಿಂದ ಹಿಡಿದು, ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಾಗಲೆಲ್ಲಾ ಬಾಲಕೃಷ್ಣ ಅವರು ಶಿವಕುಮಾರ್ ಪರ ಬಹಿರಂಗವಾಗಿ ಬ್ಯಾಟಿಂಗ್ ಮಾಡಿದ್ದರು. ಅಷ್ಟೇ ಅಲ್ಲ, ಸಚಿವ ಸಂಪುಟ ಪುನರ್ ರಚನೆಯ ಮಾತು ಕೇಳಿ ಬಂದಾಗಲೆಲ್ಲಾ, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಸಾರ್ವಜನಿಕವಾಗಿಯೇ ಆಸೆ ತೋಡಿಕೊಂಡಿದ್ದರು. ಅದರಂತೆ ಸಚಿವ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ ಸ್ಥಾನವನ್ನೂ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಎಚ್.ಸಿ.ಬಾಲಕೃಷ್ಣ.