ಬಲಮುರಿ ಕಣ್ಣೇಶ್ವರ, ಅಗಸ್ತ್ಯೇಶ್ವರ ದೇವಸ್ಥಾನ: ಇಂದು ಕಾವೇರಿ ಜಾತ್ರೆ, ಸಿದ್ಧತೆ ಪೂರ್ಣ

KannadaprabhaNewsNetwork |  
Published : Oct 18, 2024, 12:12 AM IST
32 | Kannada Prabha

ಸಾರಾಂಶ

ಪ್ರತಿವರ್ಷದಂತೆ ಅಗಸ್ತ್ಯೇಶ್ವರ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಜಾತ್ರೆ ಜರುಗಲಿದೆ.ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಮಹಾಮಂಗಳಾರತಿ ನೆರವೇರಿಸಿ ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆದು ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕಾವೇರಿ ತೀರದ ಪವಿತ್ರ ಯಾತ್ರಾಸ್ಥಳ ಬಲಮುರಿಯಲ್ಲಿ ಕಾವೇರಿ ಜಾತ್ರೆ ಶುಕ್ರವಾರ ಸಂಭ್ರಮದಿಂದ ಜರುಗಲಿದ್ದು ಅಗತ್ಯ ಸಿದ್ಧತೆ ಮಾಡಲಾಗಿದೆ.

ಕಣ್ಣೇಶ್ವರ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಿ ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿವರ್ಷದಂತೆ ಅಗಸ್ತ್ಯೇಶ್ವರ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಜಾತ್ರೆ ಜರುಗಲಿದೆ.ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಮಹಾಮಂಗಳಾರತಿ ನೆರವೇರಿಸಿ ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆದು ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದೆ.

ತುಲಾಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮಸ್ಥಾನ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳುವರು.

ಪ್ರತಿವರ್ಷ ಕಾವೇರಿ ತೀರ್ಥೋದ್ಭವದ ಮರುದಿನ ಬಲಮುರಿ ಜಾತ್ರೆ ನಡೆಯುವುದು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಪುಣ್ಯಸ್ಥಳ. ಬಲಮುರಿಯಲ್ಲಿ ಕಣ್ಣೇಶ್ವರ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಿವೆ.

ಕಾವೇರಿ ನದಿಯ ಎಡಭಾಗದಲ್ಲಿ ಕಣ್ಣೇಶ್ವರ ಹಾಗೂ ಬಲಭಾಗದಲ್ಲಿ ಅಗಸ್ತ್ಯೇಶ್ವರ ದೇವಾಲಯಗಳಿದ್ದು ಸುಂದರವಾದ ಪರಿಸರದಿಂದ ಕೂಡಿದೆ. ಇಲ್ಲಿ ಪಿಂಡ ಪ್ರದಾನ ಮಾಡಿದರೆ ತಲಕಾವೇರಿಯಲ್ಲಿ ಮಾಡಿದಷ್ಟೇ ಪುಣ್ಯ ಬರುತ್ತದೆ ಎಂಬುದು ಆಸ್ತಿಕರ ನಂಬಿಕೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ