ನಂದಿನಿ ಉತ್ಪನ್ನಗಳ ಮೇಲೆ ಅಪಪ್ರಚಾರಕ್ಕೆ ಬಮೂಲ್ ನಿರ್ದೇಶಕ ಬಿ.ವಿ ಸತೀಶ್ ಗೌಡ ಖಂಡನೆ

KannadaprabhaNewsNetwork |  
Published : Feb 23, 2026, 01:30 AM IST
ಸೂಲಿಬೆಲೆ ಹೋಬಳಿ ಬೆಂಡಿಗಾನಹಳ್ಳಿಯಲ್ಲಿ ಬಮೂಲ್ ನಿರ್ದೇಶಕ ಬಿ.ವಿ ಸತೀಶ್‌ಗೌಡರು ಮಾತನಾಡಿದರು | Kannada Prabha

ಸಾರಾಂಶ

ಕೆಲವು ಖಾಸಗಿ ವ್ಯಕ್ತಿಗಳು ನಂದಿನಿ ಹಾಲಿನ ಮಾರುಕಟ್ಟೆ ಹಾಳು ಮಾಡಬೇಕು ಎಂಬ ದುರುದ್ದೇಶವನ್ನಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿದ್ದು, ನಂದಿನಿ ರೈತರಿಂದ ಕಟ್ಟಿರುವ ಸಂಸ್ಥೆಯಾಗಿದೆ. ರೈತರ ನೀಡಿರುವ ನೀಡಿರುವ ಹಾಲನ್ನು ಸಂಸ್ಕರಿಸಿ ಎಲ್ಲ ರೀತಿಯ ತಪಾಸಣೆ ಮಾಡಿ ಉತ್ಪನ್ನ ತಯಾರಿಸಲಾಗುತ್ತಿದೆ. ಹಾಲಿನ ಎಲ್ಲ ರೀತಿ ಗುಣಮಟ್ಟ ಪರೀಕ್ಷೆ ಮಾಡಿದ ನಂತರವೇ ಮಾರುಕಟ್ಟೆಗೆ ರವಾನೆಯಾಗುತ್ತಿದೆ. ಉದ್ದೇಶಪೂರ್ವಕವಾಗಿ ಕೆಲವರು ನಂದಿನಿ ಬಗ್ಗೆ ತಪ್ಪು ಸಂದೇಶ ಹರಡುತ್ತಿದ್ದಾರೆ.

ಸೂಲಿಬೆಲೆ: ಜನರ ವಿಶ್ವಾಸ, ನಂಬಿಕೆಯನ್ನು ಗಳಿಸಿರುವ ನಂದಿನಿ ಉತ್ಪನ್ನಗಳ ಮೇಲೆ ಕೆಲವರು ತಪ್ಪು ಸಂದೇಶಗಳನ್ನು ನೀಡಿ ದಾರಿ ತಪ್ಪಿಸುತ್ತಿರುವುದು ಖಂಡನೀಯ. ಈ ಉತ್ಪನ್ನಗಳ ಸೇವನೆಯಿಂದ ಯಾವುದೇ ತೊಂದರೆಯಿಲ್ಲ ಎಂದು ಬಮೂಲ್ ನಿರ್ದೇಶಕ ಬಿ.ವಿ ಸತೀಶ್ ಗೌಡ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ರೈತರು ಕಟ್ಟಿ ಬೆಳೆಸಿರುವ ನಂದಿನಿ ಉತ್ಪನ್ನಗಳು ಗುಣಮಟ್ಟದಿಂದ ಕೂಡಿವೆ. ಪ್ರತಿ ನಿತ್ಯ ಗ್ರಾಮೀಣ ಭಾಗದಿಂದ ರೈತರು ಪೂರೈಕೆ ಮಾಡುತ್ತಿರುವ ಗುಣಮಟ್ಟದ ಹಾಲಿನಿಂದ ತಯಾರಾಗುವ ಉತ್ಪನ್ನಗಳ ಬಗೆ ಅಪ್ರಚಾರ ಮಾಡುತ್ತಿರುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವ ಸಂಶಯವಿದೆ. ಗುಣಮಟ್ಟದಲ್ಲಿ ನಂದಿನಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ಬಮೂಲ್ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.

ಹೊಸಕೋಟೆ ಶಿಬಿರ ಉಪ ವ್ಯವಸ್ಥಾಪಕ ಶ್ರೀರಾಮ್ ಮಾತನಾಡಿ, ಕೆಲವು ಖಾಸಗಿ ವ್ಯಕ್ತಿಗಳು ನಂದಿನಿ ಹಾಲಿನ ಮಾರುಕಟ್ಟೆ ಹಾಳು ಮಾಡಬೇಕು ಎಂಬ ದುರುದ್ದೇಶವನ್ನಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿದ್ದು, ನಂದಿನಿ ರೈತರಿಂದ ಕಟ್ಟಿರುವ ಸಂಸ್ಥೆಯಾಗಿದೆ. ರೈತರ ನೀಡಿರುವ ನೀಡಿರುವ ಹಾಲನ್ನು ಸಂಸ್ಕರಿಸಿ ಎಲ್ಲ ರೀತಿಯ ತಪಾಸಣೆ ಮಾಡಿ ಉತ್ಪನ್ನ ತಯಾರಿಸಲಾಗುತ್ತಿದೆ. ಹಾಲಿನ ಎಲ್ಲ ರೀತಿ ಗುಣಮಟ್ಟ ಪರೀಕ್ಷೆ ಮಾಡಿದ ನಂತರವೇ ಮಾರುಕಟ್ಟೆಗೆ ರವಾನೆಯಾಗುತ್ತಿದೆ. ಉದ್ದೇಶಪೂರ್ವಕವಾಗಿ ಕೆಲವರು ನಂದಿನಿ ಬಗ್ಗೆ ತಪ್ಪು ಸಂದೇಶ ಹರಡುತ್ತಿದ್ದಾರೆ. ಇದರ ಬಗೆ ಜನರು ತಲೆಕೆಡಿಸಿಕೊಳ್ಳಬಾರದು ಎಂದರು. ಈ ಸಂದರ್ಭದಲ್ಲಿ ಡಾ.ಸಂತೋಷ್ ಕುಮಾರ್ ಎಂ.ಡಿ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಹಾಜರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ’ : ಜಡ್ಜ್‌
ಉಚಿತ ಆರೋಗ್ಯ 10ನೇ ಗ್ಯಾರಂಟಿ ಯೋಜನೆ- ವಸತಿ 8, ಇ-ಖಾತಾ 9ನೇ ಗ್ಯಾರಂಟಿ ಸ್ಕೀಂ : ಡಿಕೆಶಿ