ಸಾಮಾಜಿಕ ಕ್ಷೇತ್ರಕ್ಕೂ ಬಮುಲ್ ಸೇವೆ ವಿಸ್ತಾರ

KannadaprabhaNewsNetwork |  
Published : Jan 27, 2026, 03:15 AM IST
ಫೋಟೋ: 25 ಹೆಚ್‌ಎಸ್‌ಕೆ 3ಹೊಸಕೋಟೆ ನಗರದ ಸಿದ್ದಾರ್ಥನಗರದಲ್ಲಿ ಬಮುಲ್ ವತಿಯಿಂದ ಅಳವಡಿಕೆ ಮಾಡಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಶಾಸಕ ಶರತ್ ಬಚ್ಛೇಗೌಡ, ಬಮುಲ್ ನಿರ್ದೇಶಕ ಬಿವಿ.ಸತೀಶ್‌ಗೌಡ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಬೆಂಗಳೂರು ಹಾಲು ಒಕ್ಕೂಟ ಕೇವಲ ಹೈನೋದ್ಯಮ ಅಷ್ಟೇ ಅಲ್ಲದೆ ಅಲ್ಲಿನ ಲಾಭಾಂಶದಲ್ಲಿ ಸಾಮಾಜಿಕ ಸೇವಾ ಕಾರ್ಯಗಳಿಗೂ ವಿಸ್ತರಿಸಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ಬೆಂಗಳೂರು ಹಾಲು ಒಕ್ಕೂಟ ಕೇವಲ ಹೈನೋದ್ಯಮ ಅಷ್ಟೇ ಅಲ್ಲದೆ ಅಲ್ಲಿನ ಲಾಭಾಂಶದಲ್ಲಿ ಸಾಮಾಜಿಕ ಸೇವಾ ಕಾರ್ಯಗಳಿಗೂ ವಿಸ್ತರಿಸಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ಸಿದ್ದಾರ್ಥನಗರದಲ್ಲಿ ಬಮುಲ್ ವತಿಯಿಂದ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಹೈನೋದ್ಯಮ ಗ್ರಾಮೀಣರ ಜೀವನಾಡಿ. ಹೈನುಗಾರಿಕೆಯಲ್ಲಿ ಬದುಕನ್ನು ಕಟ್ಟಿಕೊಂಡಿರುವ ಸಾಕಷ್ಟು ಕುಟುಂಬಗಳಿವೆ. ಹೈನು ಸಾಕಾಣಿಕೆದಾರರಿಗೆ ಅಗತ್ಯ ಸಲಹೆ ಸೂಚನೆ ನೀಡುವ ಜೊತೆಗೆ ರಾಸುಗಳಿಗೆ ಅಗತ್ಯ ಪೌಷ್ಟಿಕ ಆಹಾರ ನೀಡುವ ಮೂಲಕ ಹೆಚ್ಚಿನ ಪ್ರಮಾಣದ ಹಾಲು ಉತ್ಪಾದನೆಗೆ ಬಮುಲ್ ಶ್ರಮಿಸುತ್ತಿದೆ. ಈ ನಡುವೆ ಬಮುಲ್ ಕಲ್ಯಾಣ ಟ್ರಸ್ಟ್ ಮೂಲಕ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮಾಡುವ ಮೂಲಕ ಗ್ರಾಮೀಣರು ಶುದ್ಧ ಕುಡಿಯುವ ನೀರು ಕುಡಿಯಲು ಅನುವು ಮಾಡಿಕೊಡುತ್ತಿದೆ. ತಾಲೂಕಿನ ಸಾಕಷ್ಟು ಗ್ರಾಮಗಳಲ್ಲಿ ಬಮುಲ್ ವತಿಯಿಂದಲೆ ವಾಟರ್ ಫಿಲ್ಟರ್ ಅಳವಡಿಸಿ ಜನರಿಗೆ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಬಮುಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ ಮಾತನಾಡಿ, ಸುಮಾರು 6 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರನ ಘಟಕವನ್ನು ಸಿದ್ದಾರ್ಥನಗರದ ಜನರ ಬೇಡಿಕೆಗನುಗುಣವಾಗಿ ನೀಡಲಾಗಿದೆ. ೫ ರು. ನಾಣ್ಯದ ಮೂಲಕ 25 ಲೀಟರ್‌ ನೀರು ಪಡೆಯಬಹುದು. ಬಮುಲ್ ಹಾಲು ಉತ್ಪಾದಕರ ಶ್ರೇಯೋಭಿವೃದ್ಧಿ ಜೊತೆಗೆ ಸಮಾಜದ ಅಭಿವೃದ್ಧಿಗೂ ಮುಂದಡಿ ಇಟ್ಟಿದ್ದು ಹಲವರು ಸಮಾಜಮುಖಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಡಿ.ಕೆ.ಸುರೇಶ್ ಅವರು ಬಮುಲ್ ಅಧ್ಯಕ್ಷರಾಗಿ ಅಧಿಕಾರ ಪಡೆದ ನಂತರ ಬಮುಲ್ ಸೇವಾ ಚಟುವಟಿಕೆ ಮತ್ತಷ್ಟು ವೇಗ ಕಂಡಿದೆ ಎಂದರು.

ಈ ಸಂದರ್ಭದಲ್ಲಿ ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಭೈರೇಗೌಡ, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಡಾ.ಹೆಚ್.ಎಂ.ಸುಬ್ಬರಾಜ್, ಮಾಜಿ ಅದ್ಯಕ್ಷರಾದ ಡಾ.ಸಿ.ಜಯರಾಜ್, ವಿಜಯ್ ಕುಮಾರ್ ಇತರರು ಹಾಜರಿದ್ದರು.

ಫೋಟೋ: 25 ಹೆಚ್‌ಎಸ್‌ಕೆ 3

ಹೊಸಕೋಟೆಯ ಸಿದ್ದಾರ್ಥನಗರದಲ್ಲಿ ಬಮುಲ್ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಶರತ್ ಬಚ್ಛೇಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹400 ಕೋಟಿ ದರೋಡೆ ಕೇಸ್‌ನ ಸಂಭಾಷಣೆ ಆಡಿಯೋ ವೈರಲ್‌!
ಇಂದಿನಿಂದ ಮತ್ತೆ ಕಲಾಪ : ಭಾರೀ ಕೋಲಾಹಲ ನಿರೀಕ್ಷೆ