ಕನ್ನಡಪ್ರಭ ವಾರ್ತೆ ಮಂಡ್ಯ
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಪ್ರವಾಸಿ ತಾಣಗಳಲ್ಲಿ ಕಾವೇರಿ ನದಿಗೆ ಇಳಿದು ಹಲವರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಸಭೆ ನಡೆಸಿ ಮಾತನಾಡಿದರು.
ಬಲಮುರಿ ಮತ್ತು ಸುತ್ತಮುತ್ತಲಿನ ಅಪಾಯಕಾರಿ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗೆ ಇಳಿಯುವುದು ಮತ್ತು ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸುರಕ್ಷತೆ ಇಲ್ಲದ ತೆಪ್ಪ ಬಳಸುವುದನ್ನೂ ನಿಷೇಧಿಸಿರುವುದಾಗಿ ಹೇಳಿದರು.ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮ, ತಾಲೂಕು ತಹಸೀಲ್ದಾರ್ ಹಾಗೂ ಪೊಲೀಸ್ ಇನ್ ಸ್ಪೆಕ್ಟರ್ ಸೇರಿದಂತೆ ಸಮಿತಿ ರಚಿಸಲಾಗಿದೆ. ಎಚ್ಚರಿಕೆ ಫಲಕಗಳ ಅಳವಡಿಕೆ, ನದಿಯ ನೀರಿನ ತೀವ್ರತೆ ಹಾಗೂ ನೀರಿನ ಆಳದ ಅರಿವಿಲ್ಲದೆ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿರುವುದರಿಂದ, ನದಿ ಪಾತ್ರದ ಅಪಾಯಕಾರಿ ವಲಯಗಳಲ್ಲಿ ದೊಡ್ಡದಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ವೆಂಕಟರಮಣಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಧಿತರಿದ್ದರು.