ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸ್ವಾಗತಾರ್ಹ: ಯೋಗೇಶ್‌

KannadaprabhaNewsNetwork |  
Published : Mar 07, 2026, 12:30 AM IST
ಪೋಟೋ: 06ಎಸ್‌ಎಂಜಿಕೆಪಿ11: ಎಚ್‌.ಸಿ.ಯೋಗೇಶ್ | Kannada Prabha

ಸಾರಾಂಶ

ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣಗಳಲ್ಲಿ ಪೈಲೆಟ್ ತರಬೇತಿ ಕೇಂದ್ರ ನಿರ್ಮಾಣವು ಬಹಳಷ್ಟು ಯುವಕರಿಗೆ ಅನುಕೂಲವಾಗುವುದರ ಜೊತೆಗೆ ಸಂತೋಷವನ್ನು ತಂದು ಕೊಟ್ಟಿದೆ.

ಶಿವಮೊಗ್ಗ: ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾಗಿರುವ ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣಗಳಲ್ಲಿ ಪೈಲೆಟ್ ತರಬೇತಿ ಕೇಂದ್ರ ನಿರ್ಮಾಣವು ಬಹಳಷ್ಟು ಯುವಕರಿಗೆ ಅನುಕೂಲವಾಗುವುದರ ಜೊತೆಗೆ ಸಂತೋಷವನ್ನು ತಂದು ಕೊಟ್ಟಿದೆ. ಮಕ್ಕಳಿಗೆ ಈಗಾಗಲೇ ಮಾರಕವಾಗಿರುವ ಸೋಶಿಯಲ್ ಮೀಡಿಯಾ ಬಳಕೆಯನ್ನು 16 ವರ್ಷದ ಒಳಗಿನ ಮಕ್ಕಳಿಗೆ ಬ್ಯಾನ್ ಮಾಡಿರುವುದು ಸ್ವಾಗತಾರ್ಹ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಯೋಗೇಶ್‌ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯವರಾದ ಶಾಂತವೇರಿ ಗೋಪಾಲ್ ಗೌಡ ರವರ ಹೆಸರನ್ನು ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಗೆ ಇಟ್ಟಿರುವುದು ಹೆಮ್ಮೆಯ ವಿಚಾರ. ಈ ಬಾರಿಯ ಬಜೆಟ್ ನಲ್ಲಿ ಹೊಸ ನೇಮಕಾತಿಯ ವಿಚಾರವಾಗಿ ಹಾಗೂ ಆರೋಗ್ಯದ ವಿಚಾರವಾಗಿ ಮತ್ತು ಉದ್ಯೋಗದ ವಿಚಾರವಾಗಿ ಹೆಚ್ಚಿನ ಹೊತ್ತನ್ನು ನೀಡಿರುವುದು ಸಹ ಸ್ವಾಗತಾರ್ಹ.

ಒಟ್ಟಾರೆಯಾಗಿ ಈ ಬಾರಿಯ ಬಜೆಟ್ ಉತ್ತಮವಾಗಿದ್ದು, ಐದು ಗ್ಯಾರಂಟಿಗಳನ್ನು ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಬಾರಿಯೂ ದಿವಾಳಿ ದಿವಾಳಿ ಎಂಬ ಮಾತುಗಳನ್ನು ಹೇಳುತ್ತಿದ್ದರು, ಆದರೂ ಸಹ ರಾಜ್ಯದ ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗೆ ಹಣ ನೀಡಿರುವುದೇ 17ನೇ ಬಜೆಟ್ಟಿನ ಆರನೇ ಗ್ಯಾರಂಟಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗನ ಸಾವಿಗೆ ಮೋದಿ ಸೇಡು ತೀರಿಸಿದ್ದಕ್ಕೆ ನೆಮ್ಮದಿ : ಸುಮತಿ
ಗೋಲ್ಡ್‌ ಸ್ಮಗ್ಲರ್‌, ನಟಿ ರನ್ಯಾ ರಾವ್‌ 1 ವರ್ಷ ಬಳಿಕ ಜೈಲಿಂದ ಬಿಡುಗಡೆ!