ಹುಬ್ಬಳ್ಳಿ:
ಅವರು ಇಲ್ಲಿನ ಎಪಿಎಂಸಿ ಆವರಣದಲ್ಲಿರುವ ವಸ್ತು ಸಂಗ್ರಹಾಲಯದಲ್ಲಿ ಭಾನುವಾರ ತಾಲೂಕು ಬಣಜಿಗ ಸಮಾಜದಿಂದ ಹಮ್ಮಿಕೊಳ್ಳಲಾಗಿದ್ದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ಸಮಾಜ ಮೌನವಾಗಿದೆ ಎಂದರೆ ಅದು ನಮ್ಮ ದೌರ್ಬಲ್ಯವಲ್ಲ. ಎಲ್ಲ ಸಮಾಜದವರನ್ನು ಸೇರಿಸಿಕೊಂಡು ಮುಂದೆ ತರುವ ಕೆಲಸವನ್ನು ಬಣಜಿಗರು ಮಾಡುತ್ತಿದ್ದಾರೆ. ಬ್ರಿಟಿಷರಂತೆ ಒಡೆದಾಳುವ ನೀತಿ ಅನುಸರಿಸಿ ತಮ್ಮ ರಾಜಕೀಯ ಬೆಳೆ ಬೆಯಿಸಿಕೊಳ್ಳುತ್ತಿರುವರು ಇಂದಿಗೂ ಇದ್ದಾರೆ. ನಮ್ಮ ಸ್ವಾರ್ಥ ನಮ್ಮನ್ನು ಕಿತ್ತು ತಿನ್ನುತ್ತಿದೆ. ನಮ್ಮ ನಮ್ಮವರಿಂದಲೇ ಕಾಲೆಳೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಲಿಂಗಾಯತ ಮಠಗಳು ಯಾವುದೇ ಜಾತಿ, ಮತ ಎಂಬುದನ್ನು ಕೇಳದೆ ಎಲ್ಲರಿಗೂ ಆಶ್ರಯ ನೀಡಿವೆ. ಆದರೆ, ಇಂದು ನಮ್ಮತನವನ್ನು ನಾವು ಮರೆಯುತ್ತಿದ್ದೇವೆ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಸಂಸ್ಕಾರವನ್ನು ನೀಡಬೇಕಿದೆ. ಒಳಪಂಗಡಗಳನ್ನು ಮರೆತು ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತ ಒಟ್ಟಾಗಿ ದುಡಿಯೋಣ ಎಂದು ಕರೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ್ದ ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಬಣಜಿಗರು ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದಯುತವಾಗಿ ಬಾಳುತ್ತಿದ್ದೇವೆ. ಇದೀಗ ಜಾತಿ ಗಣತಿ, ಜನ ಗಣತಿ ನಡೆಯುತ್ತಿದೆ. ಹೀಗಾಗಿ ಸಮಾಜದ ಗಣತಿ ಮಾಡಬೇಕಿದೆ. ಅದರೊಂದಿಗೆ ವೀರಶೈವ ಲಿಂಗಾಯತ ಸಮಾಜಕ್ಕೆ ಶಕ್ತಿ ನೀಡಬೇಕಿದೆ ಎಂದರು.
ಶಾಸಕ ಮಹೇಶ ಟೆಂಗಿನಕಾಯಿ. ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಹಾಗೂ ಸಾನ್ನಿಧ್ಯ ವಹಿಸಿದ್ದ ಬಂಡಿವಾಡ-ಅಣ್ಣಿಗೇರಿ ಗಿರೀಶ ಆಶ್ರಮದ ಎ.ಸಿ. ವಾಲಿ ಮಹಾರಾಜರು, ಸೇರಿದಂತೆ ಹಲವರಿ ಮಾತನಾಡಿದರು. ಬಳಿಕ ಮಕ್ಕಳು ಹಾಗೂ ಮಹಿಳೆಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.