ಬಣಜಿಗರು ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಲಿ: ಮರಿರಾಜುಗೌಡ

KannadaprabhaNewsNetwork |  
Published : Jul 07, 2026, 02:45 AM IST
ಕುರುಗೋಡಿನಲ್ಲಿ೦೧ ಪಟ್ಟಣದ ಭಾನುವಾರ ಜರುಗಿದ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಸಮಾವೇಶದಲ್ಲಿ ನೂತನ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆಯಾದ ಸನ್ಮಾನಿಸಿ ಎಚ್.ಹೇಮಾದ್ರಿ, ಅವರು ಸನ್ಮಾನಿಸಿ  ಅವರು ಮಾತನಾಡಿದರು.ಜಿಲ್ಲಾ ಘಟಕದ ಅಧ್ಯಕ್ಷ ಮರಿರಾಜು ಗೌಡ ಮಾತನಾಡಿದರು | Kannada Prabha

ಸಾರಾಂಶ

ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಬಣಜಿಗ ಸಮಾಜ ನಾಡಿನಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ.

ಕುರುಗೋಡು: ಒಳ ಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಮರಿರಾಜುಗೌಡ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಭಾನುವಾರ ಎಂ.ಡಿ.ಎಂ ಶಾಲಾ ಅವರಣದಲ್ಲಆಯೋಜಿಸಿದ್ದ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆಯಾದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಬಣಜಿಗ ಸಮಾಜ ನಾಡಿನಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಸಮಾಜದ ದ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದಾಗಬೇಕು ಎಂದರು.

ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದಪ್ಪ ದಂಡಿನ್ ಮಾತನಾಡಿ, ವ್ಯಾಪಾರ ವಹಿವಾಟು ನಡೆಸುತ್ತ ಸಮಾಜದ ಎಲ್ಲ ವರ್ಗದವರೊಂದಿಗೆ ಸೌಹಾರ್ದಯುತವಾಗಿ ಜೀವಿಸುವ ಬಣಜಿಗ ಸಮಾಜವನ್ನು ಸಾಮಾನ್ಯ ವರ್ಗಕ್ಕೆ ಸೇರಿಸಿದ್ದಾರೆ. ಇದರಿಂದ ಮಕ್ಕಳ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಹಿನ್ನಡೆಯಾಗುತ್ತಿದೆ. ಪ್ರವರ್ಗ೨ಎ ನೀಡುವಂತೆ ಒತ್ತಾಯಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಟ ರೂಪಿಸುವ ಅಗತ್ಯವಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿದರು. ೨ನೇ ಶತಮಾನದಲ್ಲಿನ ಬಸವಣ್ಣನವರ ತತ್ವದಿಂದ ಪ್ರೇರಿತರಾದ ಬಣಜಿಗರು ಲಿಂಗವಂತರಾಗಿ ಬದಲಾಗಿದ್ದೇವೆ ಎಂದು ವ್ಯಾಪಾರ ವೃತ್ತಿಯಲ್ಲಿ ಗುರುತಿಸಿಕೊಂಡಿರುವ ಬಣಜಿಗರು. ಅನ್ಯ ಜಾತಿ ಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಸಮುದಾಯಕ್ಕೆ 2ಎ ಮೀಸಲಾತಿ ಅಗತ್ಯ ಇದೆ. ಆದರೆ ೨ಎ ಸೇರಲು ಎಲ್ಲರೂ ಸೇರಿಕೊಂಡು ಹೋರಾಟ ನಡೆಸಬೇಕು ಎಂದು ಮನವಿ ಮಾಡಿದರು.

ಬಣಜಿಗ ಸಮಾಜದ ಸಮ್ಮುಖದಲ್ಲಿ ನೂತನ ತಾಲೂಕು ಅಧ್ಯಕ್ಷರದ ಎಚ್.ಹೇಮಾದ್ರಿ, ಆಯ್ಕೆ ಮಾಡಲಾಯಿತು. ಎನ್.ವೀರೇಂದ್ರ ಗೌಡ ಕಾರ್ಯಕ್ರಮ ಕುರಿತು ಪ್ರಸ್ತಾವಿಕ ಮಾತನಾಡಿದರು. ಎನ್.ಮರೇಗೌಡ, ಜೆ. ಸೋಮಶೇಖರ ಗೌಡ, ಎಚ್.ವಾಗೀಶ್, ಅಂಗಡಿ ಶಂಕ್ರಪ್ಪ, ಎಚ್.ಹೇಮಾದ್ರಿ, ಕೋರಿ ವಿರೂಪಾಕ್ಷಪ್ಪ, ರಾಜಣ್ಣ, ಗುತ್ತಿಗನೂರು ಚಂದ್ರೇಗೌಡ, ಗಂಗಾವತಿ ವೀರೇಶ್ ಮತ್ತು ಶಾಪುರ ದೊಡ್ಡ ರಂಗಪ್ಪ, ಜಗದೀಶ್, ಶಿಕ್ಷಕರಾದ ಗವಿಯಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೌಶಲ್ಯ ಅಭಿವೃದ್ಧಿ ಪಡಿಸುವುದೇ ಕಲಾ ಉತ್ಸವದ ಉದ್ದೇಶ: ತಹಸೀಲ್ದಾರ
ಮೂಲಭೂತ ಸೌಲಭ್ಯಕ್ಕೆ ಆಗ್ರಹ: ಎಸ್‌ಐಆರ್‌ ಜಾಗೃತಿ ಬೈಕ್‌ ರ್‍ಯಾಲಿಗೆ ತಡೆ