ಕನ್ನಡಪ್ರಭ ವಾರ್ತೆ ಮೈಸೂರು
ಶ್ರೀ ಶಿವರಾತ್ರೀಶ್ವರ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣಕ್ಕಾಗಿ ಸೌಲಭ್ಯಗಳು ಇಲ್ಲದ ಪರಿಸ್ಥಿತಿಯಲ್ಲಿ ಶ್ರೀರಾಜೇಂದ್ರ ಸ್ವಾಮೀಜಿ, ಕೆ.ಆರ್. ನಗರದಲ್ಲಿ ಪ್ರೌಢಶಾಲೆ ಹಾಗೂ ವಿದ್ಯಾರ್ಥಿನಿಲಯ ಪ್ರಾರಂಭಿಸಿರುವ ವಿಚಾರ ತಿಳಿದು ಶ್ರೀಗಳ ಆಶೀರ್ವಾದ ಪಡೆದು ವಿದ್ಯಾಭ್ಯಾಸ ಪೂರೈಸಿದೆ. ಬಳಿಕ ಇದೇ ಸಂಸ್ಥೆಯ ಚಾಮರಾಜನಗರ ಜೆಎಸ್ಎಸ್ ಕಾಲೇಜಿನಲ್ಲಿ ಉಫನ್ಯಾಸಕನಾಗಿಯೂ ಸೇವೆ ಸಲ್ಲಿಸಿದೆ ಎಂದರು.
ವಿದ್ಯಾರ್ಥಿ ನಿಲಯದಲ್ಲಿ ನಾನು ಪಡೆದುಕೊಂಡ ಸಂಸ್ಕೃತಿ, ಸಂಸ್ಕಾರಗಳು ಜೀವನದಲ್ಲಿ ಬಹಳಷ್ಟು ಸಹಕಾರಿಯಾದವು. ಇವೆಲ್ಲದರ ಕಾರಣದಿಂದಾಗಿ ನನ್ನಂತೆ ಇನ್ನೂ ಬಹಳಷ್ಟು ಜನ ಜೀವನದಲ್ಲಿ ಉನ್ನತ ಸ್ಥಾನಮಾನ ಹೊಂದಿ ಜೀವನ ಹಸನು ಮಾಡಿಕೊಂಡಿದ್ದಾರೆ. ಶ್ರೀಮಠದಿಂದ ಪಡೆದ ಉಪಕಾರಕ್ಕೆ ಪ್ರತಿಯಾಗಿ ಸಮಾಜಕ್ಕೆ ಏನಾದರೂ ಕೈಲಾದ ಸೇವೆ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಶ್ರೀಮಠಕ್ಕೂ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.ಗ್ರಾಮೀಣ ಪ್ರದೇಶದಿಂದ ಆರಂಭಗೊಂಡ ಸಂಸ್ಥೆಯ ಕಾರ್ಯಚಟುವಟಿಕೆ ಪ್ರಸ್ತುತ ಅಂತಾರಾಷ್ಟ್ರೀಯ ಮಟ್ಟದವರೆಗೂ ವಿಸ್ತರಿಸಿವೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ ಧೀಶಕ್ತಿಯ ಕಾರಣದಿಂದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳದಿದೆ. ಜೆಎಸ್ಎಸ್ ಮಹಾವಿದ್ಯಾಪೀಠವು ಮಾನವ ಬದುಕಿಗೆ ಉಜ್ವಲವಾದ ಬೆಳಕು ನೀಡುತ್ತಿದೆ ಎಂದು ಅವರು ಹೇಳಿದರು.
ಡಾ.ಎಂ. ನಂಜುಂಡಪ್ಪ ಮಾತನಾಡಿ, ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ಪ್ರಸಾದ ಮತ್ತು ವಿದ್ಯಾರ್ಜನೆಗೆ ತೊಂದರೆಗಳಿದ್ದರೂ ಅವುಗಳೆಲ್ಲವನ್ನೂ ಅತ್ಯಂತ ತಾಳ್ಮೆಯಿಂದ ನಿಭಾಯಿಸಿದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು ವ್ಯವಸ್ಥೆ ಮಾಡಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಶ್ರೀಮಠದ ಆಶ್ರಯ ಪಡೆದು ಉನ್ನತ ಅಧಿಕಾರಿಗಳಾಗಿ ವಿಶ್ವದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಾ ಪೂಜ್ಯರನ್ನು ಅನವರತವೂ ನೆನೆಪಿಸಿಕೊಳ್ಳುತ್ತಿದ್ದಾರೆ ಎಂದರು.
ಅಧ್ಯಕ್ಷ ಎಲ್. ರೇವಣ್ಣಸಿದ್ದಯ್ಯ ಅವರು ಶ್ರೀ ಸಿದ್ದಗಂಗಾ ಮಠದಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿವರೆಗೆ ವಿದ್ಯಾಭ್ಯಾಸ ಮಾಡಿ ನಂತರದ ವಿದ್ಯಾಭ್ಯಾಸಕ್ಕೆ ಮೈಸೂರಿಗೆ ಬಂದು ರಾಜೇಂದ್ರ ಶ್ರೀಗಳಲ್ಲಿ ಆಶ್ರಯ ಕೇಳಿಕೊಂಡಾಗ ಪ್ರಧಾನ ಭವನದ ವಿದ್ಯಾರ್ಥಿನಿಲಯದಲ್ಲಿರುವಂತೆ ಆಶೀರ್ವಾದ ಮಾಡಿದರು.
ಎ.ಎಸ್. ಚನ್ನಬಸಪ್ಪ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಮಂಟೇಲಿಂಗಾ ಚಾರ್ ವಂದಿಸಿದರು.