ವಿಶ್ವದ ಭೂಪಟದಲ್ಲಿ ಬೆಂಗಳೂರಿಗೆ ವಿಶೇಷ ಸ್ಥಾನ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Jun 28, 2025, 12:18 AM IST
ಕೆಂಪೇಗೌಡ ಜಯಂತಿ ಆಚರಿಸಲಾಯಿತು  | Kannada Prabha

ಸಾರಾಂಶ

ಇಡೀ ಜಗತ್ತಿನಲ್ಲೇ ಕರ್ನಾಟಕ ವಿಶೇಷ ಸ್ಥಾನ ಮಾನ ಪಡೆದ ಭಾರತದ ರಾಜ್ಯವಾಗಿದೆ.

ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಉದ್ಘಾಟಿಸಿದರು.ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿ, ಇಡೀ ಜಗತ್ತಿನಲ್ಲೇ ಕರ್ನಾಟಕ ವಿಶೇಷ ಸ್ಥಾನ ಮಾನ ಪಡೆದ ಭಾರತದ ರಾಜ್ಯವಾಗಿದ್ದು, ವಿಶ್ವದ ಜನರು ನಮ್ಮನ್ನು ಗುರುತಿಸಿಸುವುದು ಸಿಲಿಕಾನ್ ಸಿಟಿ ಬೆಂಗಳೂರಿನಿಂದ. ವಿಶ್ವದ ಭೂಪಟದಲ್ಲಿ ಬೆಂಗಳೂರಿಗೆ ವಿಶೇಷ ಸ್ಥಾನ ಮಾನವಿದೆ. ನಾಡಪ್ರಭು ಕೆಂಪೇಗೌಡ ಎಂದರೇ ನಮಗೆ ನೆನಪಗುವುದು ಬೆಂಗಳೂರು. ಅವರ ಪರಿಶ್ರಮದ ಪ್ರತಿಫಲ ಮತ್ತು ದೂರದೃಷ್ಟಿಯಿಂದಾಗಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಸಿಲಿಕಾನ್ ಸಿಟಿಯಾಗಿ ನಿರ್ಮಾಣವಾಗಿದೆ ಎಂದರು.ವಿಜಯನಗರದ ಅರಸರ ಆಳ್ವಿಕೆ ನಂತರ ಬೆಂಗಳೂರಿನ ಆಡಳಿತವನ್ನು ಕೆಂಪೇಗೌಡರು ಮುಂದುವರಿಸುತ್ತಾರೆ. ಅನೇಕ ರಾಜ್ಯಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಲಭ್ಯಗಳು ಇರುವುದರಿಂದ ಇಲ್ಲಿ ನವನಗರ ನಿರ್ಮಿಸುವ ಕನಸು ಕಂಡು ಸುಭದ್ರವಾದ ನಾಡು ನಿರ್ಮಾಣ ಮಾಡಿ, ಯಾವುದೇ ಜಾತಿ ಧರ್ಮ ಎನ್ನದೇ ಕೌಶಲ್ಯಾಭಿವೃದ್ದಿಗೆ ಅವಕಾಶ ಕಲ್ಪಿಸಿದರು. ಕೃಷಿಯ ಅಭಿವೃದ್ಧಿಗೆ ನೀರಿನ ಕೊರತೆ ಆಗದಂತೆ ಕೆರಕಟ್ಟಿ, ಕಾಲುವೆ ನಿರ್ಮಾಣ ಮಾಡಿದರು, ಅನೇಕ ದೇವಾಲಯ, ಪೇಟೆಗಳನ್ನು ನಿರ್ಮಾಣ ಮಾಡಿ ಧರ್ಮಪ್ರಭು ಎಂಬ ಹೆಸರನ್ನು ಪಡೆದರು ಎಂದರು.

ನಿವೃತ್ತ ಕನ್ನಡ ಉಪನ್ಯಾಸಕ ಮಾಣೇಶ್ವರ ನಾರಾಯಣ ನಾಯಕ ಕೆಂಪೇಗೌಡ ಕುರಿತು ಉಪನ್ಯಾಸ ನೀಡಿ, ಪರೋಪಕಾರಿ, ಜನಾನುರಾಯಾಗಿ, ಅದ್ಬುತವಾದ, ದಕ್ಷ ಪ್ರಾಮಾಣಿಕ ಆಡಳಿತಗಾರನಾಗಿ, ಬೆಂಗಳೂರು ನಿರ್ಮಾತೃರಾಗಿ ಇಡೀ ಪ್ರಪಂಚದಲ್ಲಿ ತನ್ನ ಹೆಸರನ್ನು ಉಳಿಸಿಹೊದ ಕೆಂಪೇಗೌಡರು ಇಂದಿಗೂ ಜನಮಾನಸರಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.

ಕೆಂಪೇಗೌಡ ಜಯಂತಿ ಪ್ರಯುಕ್ತ ವಿವಿಧ ಸ್ಪರ್ಧೆ ಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲತಾ ನಾಯಕ ಇದ್ದರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ವನಿತಾ ಶೆಟ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ