ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು 14 ಕೇಜಿ ಚಿನ್ನ ಎಗರಿಸಿದ್ದ ಬಂಗಾರಿ ಜೈಲಿಗೆ

KannadaprabhaNewsNetwork |  
Published : Dec 29, 2024, 01:20 AM ISTUpdated : Dec 29, 2024, 04:56 AM IST
Prisoner in Jail

ಸಾರಾಂಶ

ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿಯಿಂದ ಬರೋಬ್ಬರಿ ₹8.41 ಕೋಟಿ ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಐಶ್ವರ್ಯಾ ಗೌಡ ದಂಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

  ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿಯಿಂದ ಬರೋಬ್ಬರಿ ₹8.41 ಕೋಟಿ ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಐಶ್ವರ್ಯಾ ಗೌಡ ದಂಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿನಗರ ನಿವಾಸಿಗಳಾದ ಐಶ್ವರ್ಯಾ ಗೌಡ ಮತ್ತು ಪತಿ ಹರೀಶ್‌ ಬಂಧಿತರು. ವಾರಾಹಿ ವರ್ಲ್ಡ್ ಗೋಲ್ಡ್‌ ಚಿನ್ನದಂಗಡಿ ಮಾಲೀಕರಾದ ವನಿತಾ ಎಸ್‌.ಐತಾಳ್‌ ಡಿ.23ರಂದು ಐಶ್ವರ್ಯಾ ಗೌಡ, ಹರೀಶ್‌ ಮತ್ತು ನಟ ಧರ್ಮೇಂದ್ರ ವಿರುದ್ಧ ವಂಚನೆ ಸಂಬಂಧ ದೂರು ನೀಡಿದ್ದರು. ಈ ದೂರಿನ ಮೇರೆಗೆ ವಂಚನೆ, ನಂಬಿಕೆ ದ್ರೋಹ, ಬ್ಲ್ಯಾಕ್‌ ಮೇಲ್‌, ಜೀವ ಬೆದರಿಕೆ ಸೇರಿ ವಿವಿಧ ಕಲಂಗಳಡಿ ಎಫ್‌ಐಆರ್‌ ದಾಖಲಾಗಿತ್ತು.

ವಿಚಾರಣೆಗೆ ಬಂದಾಗ ಬಂಧನ: ಈ ಸಂಬಂಧ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಮೂವರು ಆರೋಪಿಗಳಿಗೂ ಪೊಲೀಸರು ನೋಟಿಸ್‌ ಜಾರಿಗೊಳಿಸಿದ್ದರು. ಅದರಂತೆ ಬೆಳಗ್ಗೆ ಇಬ್ಬರೂ ಆರೋಪಿಗಳು ವಿಚಾರಣೆಗೆ ಹಾಜರಾದಾಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಂಗ ಬಂಧನ: ಬಂಧಿತ ಆರೋಪಿಗಳನ್ನು 9ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಯಿತು. ಈ ವೇಳೆ ನ್ಯಾಯಾಧೀಶರು ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸೋಮವಾರ ರಿಮ್ಯಾಂಡ್‌ ಅಪ್ಲಿಕೇಶನ್‌ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಹೀಗಾಗಿ ಪೊಲೀಸರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಸಿದ್ದಾರೆ.

ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಟ ಧರ್ಮನಿಗಾಗಿ ಶೋಧ: ಮತ್ತೊಬ್ಬ ಆರೋಪಿ ನಟ ಧರ್ಮೇಂದ್ರ ಅಲಿಯಾಸ್‌ ಧರ್ಮ ಪ್ರಕರಣ ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಶನಿವಾರ ವಿಚಾರಣೆಗೆ ಹಾಜರಾಗುವಂತೆ ಆತನ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದರು. ಆದರೆ, ಆತ ವಿಚಾರಣೆಗೆ ಗೈರು ಹಾಜರಾಗಿದ್ದಾನೆ. ಹೀಗಾಗಿ ಪೊಲೀಸರು ಆರೋಪಿ ಧರ್ಮನ ಬಂಧನಕ್ಕೆ ಶೋಧ ಮುಂದುವರೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ