ವಾರಕ್ಕೆ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

KannadaprabhaNewsNetwork |  
Published : Jan 01, 2026, 02:45 AM IST
31ಎಚ್ಎಸ್ಎನ್3 :  | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಸಹ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಇಲ್ಲದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಎಲ್ಲಾ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸ ಜಾರಿಗೊಳಿಸುವಂತೆ ಒತ್ತಾಯಿಸಿ, ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯ ವತಿಯಿಂದ ನಗರದ ಎಸ್‌ಬಿಐ ಎನ್.ಆರ್. ವೃತ್ತ ಶಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು.

ಡಿಸೆಂಬರ್ ೨೦೨೩ರಲ್ಲಿ ಭಾರತೀಯ ಬ್ಯಾಂಕರ್ ಗಳ ಸಂಘ (ಐಬಿಎ) ಹಾಗೂ ಬ್ಯಾಂಕ್ ಸಂಘಟನೆಗಳ ನಡುವೆ ನಡೆದ ಒಪ್ಪಂದದಂತೆ ವಾರಕ್ಕೆ ಐದು ದಿನಗಳ ಕೆಲಸ ಜಾರಿಯಾಗಬೇಕಿತ್ತು. ಆದರೆ ಎರಡು ವರ್ಷಗಳು ಕಳೆದರೂ ಕೇಂದ್ರ ಸರ್ಕಾರ ಕಾರ್ಪೊರೇಟ್ ಲಾಭಿಗೆ ಮಣಿದು ಒಪ್ಪಂದ ಅನುಷ್ಠಾನಕ್ಕೆ ವಿಳಂಬ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ಸಂಚಾಲಕ ಆರ್. ಕುಮಾರ್, ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕಡಿತದಿಂದ ನೌಕರರು ಮತ್ತು ಅಧಿಕಾರಿಗಳು ತೀವ್ರ ಒತ್ತಡದಲ್ಲಿ ಕೆಲಸ ನಿರ್ವಹಿಸುವಂತಾಗಿದೆ ಎಂದು ಹೇಳಿದರು. ಇದೇ ವೇಳೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಭಾರತೀಯ ಜೀವ ವಿಮಾ ನಿಗಮದಂಥ ಇನ್ಶೂರೆನ್ಸ್ ಕಂಪನಿಗಳಲ್ಲಿ ಈಗಾಗಲೇ ವಾರಕ್ಕೆ ಐದು ದಿನಗಳ ಕೆಲಸ ಜಾರಿಯಲ್ಲಿದೆ ಎಂದು ಅವರು ಗಮನ ಸೆಳೆದರು. ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯ ವತಿಯಿಂದ ಐಬಿಎ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಎಲ್ಲಾ ಬ್ಯಾಂಕ್ ಸಿಬ್ಬಂದಿಯ ಸಹಿ ಇರುವ ಸಾಮೂಹಿಕ ಮನವಿ ಪತ್ರಗಳನ್ನು ರವಾನಿಸಲಾಗಿದೆ. ಆದರೂ ಸರ್ಕಾರ ಅಥವಾ ವಿತ್ತ ಇಲಾಖೆ ಸ್ಪಷ್ಟ ಪ್ರತಿಕ್ರಿಯೆ ನೀಡದ ಹಿನ್ನೆಲೆ ಈ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಹ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಇಲ್ಲದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆಗಳ ನಾಯಕರಾದ ಕಾಂ. ಎ.ಜೆ. ಜಾವಿದ್, ಕಾಂ. ಜಿ.ಟಿ. ಲೋಕೇಶ್, ಕಾಂ. ಚೇತನ್ ಕೊಲಿ ಮಾತನಾಡಿದರು. ಸಂಘಟನೆಯ ಮುಖಂಡರಾದ ಕಾಂ. ಜಯಚಂದ್ರ, ಕಾಂ. ಅಶೋಕ್ ಭಟ್, ಕಾಂ. ಶೀಲಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ