ಕನ್ನಡಪ್ರಭ ವಾರ್ತೆ ಮದ್ದೂರು
ಕ್ಷೇತ್ರ ವ್ಯಾಪ್ತಿಯ ಕೆ.ಬೆಳ್ಳೂರು ಗ್ರಾಮದಲ್ಲಿ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 7 ಲಕ್ಷ ರು. ವೆಚ್ಚದಲ್ಲಿ ತಂಗುದಾಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಬನ್ನಹಳ್ಳಿ ಏತ ನೀರಾವರಿ ಯೋಜನೆ ಹಳ್ಳ ಹಿಡಿದಿತ್ತು. ಇದರಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಉಂಟಾಗಿ ಬೆಳೆ ಬೆಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಯೋಜನೆಗೆ ಪುನಶ್ಚೇತನ ನೀಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವುದರಿಂದ ಕೊಳವೆಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಅಭಿಪ್ರಾಯಪಟ್ಟರು.ಜನಪ್ರತಿನಿಧಿಗಳು ಮತ್ತು ರಾಜಕೀಯ ಮುಖಂಡರು ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಕಲಹಗಳನ್ನು ಬಿಟ್ಟು ಅಭಿವೃದ್ಧಿಗೆ ಪಕ್ಷಾತೀತವಾಗಿ ಒಗ್ಗೂಡಬೇಕು. ಇದರಿಂದ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದರು.ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಕೆ.ಎಂ.ಉದಯ್
ದೇಶ ವಿದೇಶಗಳಿಂದ ವಲಸೆ ಬರುವ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.
ಪಕ್ಷಿಧಾಮಕ್ಕೆ ವಲಸೆ ಬರುವ ಪಕ್ಷಿಗಳ ಆರೋಗ್ಯಕ್ಕೆ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಚಿಕಿತ್ಸೆಗಾಗಿ ಪಟ್ಟಣ ಪ್ರದೇಶದ ಪಶು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಬೇಕಾದ ಅವಶ್ಯಕತೆ ಇತ್ತು. ಈಗ ಸ್ಥಳೀಯವಾಗಿ ಚಿಕಿತ್ಸೆ ಕೇಂದ್ರ ಪ್ರಾರಂಭಿಸಿರುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಮೂವರು ಕುರಿಗಾಹಿಗಳಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚೆಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಕೆ.ಬೆಳ್ಳೂರು ಗ್ರಾಪಂ ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಸಿದ್ದಪ್ಪಾಜಿ, ಶಿವಲಿಂಗಯ್ಯ, ಪರಿಶಿಷ್ಟ ಜಾತಿ ತಾಲೂಕು ಘಟಕದ ಅಧ್ಯಕ್ಷ ಮಹದೇವು, ಪಶು ಇಲಾಖೆ ಸಹಾಯಕ ನಿರ್ದೇಶಕ ಗೋವಿಂದ ಮತ್ತಿತರರು ಇದ್ದರು.