ವಸಂತನಗರದ ಸ್ಯಾಂಕಿ ರಸ್ತೆ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಅಳವಡಿಸಿದ್ದ ಅನಧಿಕೃತ ಬ್ಯಾನರನ್ನು ತೆರವುಗೊಳಿಸಿ, ಅಳವಡಿಸಿದ್ದವರಿಗೆ ಬಿಬಿಎಂಪಿಯು ₹50 ಸಾವಿರ ದಂಡ ವಿಧಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ವಸಂತನಗರದ ಸ್ಯಾಂಕಿ ರಸ್ತೆ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಅಳವಡಿಸಿದ್ದ ಅನಧಿಕೃತ ಬ್ಯಾನರನ್ನು ತೆರವುಗೊಳಿಸಿ, ಅಳವಡಿಸಿದ್ದವರಿಗೆ ಬಿಬಿಎಂಪಿಯು ₹50 ಸಾವಿರ ದಂಡ ವಿಧಿಸಿದೆ.
ಸ್ಯಾಂಕಿ ರಸ್ತೆ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಕೆಪಿಸಿಸಿ ಕೋ-ಅರ್ಡಿನೇಟರ್ ಹಾಗೂ ಎಬಿಡಿ ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರಾಜೀವ್ ಗೌಡ ಅವರು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಜನ್ಮ ದಿನದ ಅಂಗವಾಗಿ ಅನಧಿಕೃತವಾಗಿ ಬ್ಯಾನರನ್ನು ಅಳವಡಿಸಿದ್ದರು.
ಬ್ಯಾನರ್ ಅಳವಡಿಕೆಗೆ ಬಿಬಿಎಂಪಿ ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿದವರಿಗೆ ₹50 ಸಾವಿರ ದಂಡ ವಿಧಿಸಿ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ಆದೇಶಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.