ಬಂಟ್ವಾಳ: ಧರ್ಮಸ್ಥಳ ಅವಹೇಳನ ಖಂಡಿಸಿ ಜನಾಗ್ರಹ ಸಭೆ

KannadaprabhaNewsNetwork |  
Published : Aug 21, 2025, 02:00 AM IST
3 | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಮೇಲಿನ ಅವಹೇಳನ ಖಂಡನೆ ಹಾಗೂ ಜನಾಗ್ರಹ ಸಭೆ ಕಣಿಯೂರು ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಉಪಸ್ಥಿತಿಯಲ್ಲಿ ಬುಧವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಮೇಲಿನ ಅವಹೇಳನ ಖಂಡನೆ ಹಾಗೂ ಜನಾಗ್ರಹ ಸಭೆ ಕಣಿಯೂರು ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಉಪಸ್ಥಿತಿಯಲ್ಲಿ ಬುಧವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.ಜನಾಗ್ರಹ ಸಭೆಯಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಮಾತನಾಡಿ, ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಕಾನೂನಡಿ ಶಿಕ್ಷೆಯಾಗಬೇಕು. ಆದರೆ ಸೌಜನ್ಯನ ಹೆಸರಿನಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುವ ಷಡ್ಯಂತ್ರದ ಆರೋಪಿಗಳಿಗೆ ಕೂಡ ಶಿಕ್ಷೆಯಾಗಬೇಕು, ಧರ್ಮಸ್ಥಳ ಕ್ಷೇತ್ರದ ಯೋಜನೆಗಳಿಂದ ಇಂದು ರಾಜ್ಯದಲ್ಲಿ ಸ್ವಾವಲಂಬಿ ಬದುಕಿಗೆ ಪೂರಕವಾದ ಅವಕಾಶಗಳನ್ನು ‌ನೀಡಿದೆ ಎಂದರು.ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮಾತನಾಡಿ, ಎಸ್.ಐ.ಟಿ.ದಾರಿ ತಪ್ಪದೆ ಕ್ಷೇತ್ರಕ್ಕೆ ಕಳಂಕ ಬರದ ರೀತಿಯಲ್ಲಿ ತನಿಖೆ ನಡೆಸಲಿ ಎಂದು ಅವರು ಹೇಳಿದರು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮಾನಸಿಕವಾಗಿ ನೆಮ್ಮದಿ ನೀಡಿ ಸನಾತನ ಧರ್ಮದ ‌ಅಭಿವೃದ್ದಿಗೆ ಸಹಕಾರ ನೀಡುವ ಶಕ್ತಿ ನೀಡಲಿ ಎಂದು ಹೇಳಿದರು.ಸರಪಾಡಿ ಅಶೋಕ್ ಶೆಟ್ಟಿ ಮಾತನಾಡಿ, ಹಿಂದೂ ಧರ್ಮ ಎಚ್ಚೆತ್ತುಕೊಳ್ಳದಿದ್ದರೆ ಪ್ರತಿ ದೇವಸ್ಥಾನದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತದೆ ಎಂದರು.

ಪ್ರಮುಖರಾದ ಎಂ.ತುಂಗಪ್ಪ ಬಂಗೇರ, ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ ಶೆಟ್ಟಿ ಬೋಳಿಯಾರ್, ಸುದರ್ಶನ ಜೈನ್, ಪದ್ಮಶೇಖರ್ ಜೈನ್, ಪ್ರಕಾಶ್ ಕಾರಂತ, ದಿನೇಶ್ ಅಮ್ಟೂರು, ಸುಲೋಚನ ಜಿ.ಕೆ.ಭಟ್ , ಸದಾನಂದ ನಾವೂರು, ಪ್ರಭಾಕರ ಪ್ರಭು , ಕೆ.ಕೆ.ಪೂಂಜಾ ಸಹಿತ ಹಲವು ಗಣ್ಯರು ಇದ್ದರು.ಬಿ.ಸಿ.ರೋಡಿನ ರಕ್ತೇಶ್ವರಿ ದೇವಿ ದೇವಸ್ಥಾನದ ಬಳಿ ಸೇರಿದ್ದ ಜನಸ್ತೋಮವನ್ನು ಉದ್ದೇಶಿಸಿ ಉಜಿರೆ ಅಶೋಕ್ ‌ಭಟ್ ಮಾತನಾಡಿದರು. ಅ ಬಳಿಕ ತಹಸೀಲ್ದಾರ್ ಕಚೇರಿಗೆ ಬೇಟಿ ನೀಡಿ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಗನವಾಡಿ ನೌಕರರ ಬಹುತೇಕ ಬೇಡಿಕೆಗೆ ಕೇಂದ್ರ ಅಸ್ತು
ಫ್ಲೈಓವರ್‌ ಮೇಲೆ ಸಿಸಿಟಿವಿ ಹಾಕಲು ಖಾಕಿ ಮನವಿ