ಬಂಟ್ವಾಳ: ಮತದಾರರ ಜಾಗೃತಿಗಾಗಿ ಜಾಥಾ, ವಿದ್ಯಾರ್ಥಿಗಳಿಂದ ಬೀದಿನಾಟಕ

KannadaprabhaNewsNetwork |  
Published : Apr 14, 2024, 01:51 AM IST
ಬಂಟ್ವಾಳದಲ್ಲಿ ಮತದಾರರ ಜಾಗೃತಿಗಾಗಿ ಜಾಥಾ | Kannada Prabha

ಸಾರಾಂಶ

ಮೌನೇಶ್ ವಿಶ್ವಕರ್ಮ ನಿರ್ದೇಶನದಲ್ಲಿ ಕಾರ್ಮೆಲ್ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳು ‘ಮತ ಮಾರಾಟಕ್ಕಲ್ಲ’ ಎನ್ನುವ ಜಾಗೃತಿ ಬೀದಿನಾಟಕವನ್ನು ಕೈಕಂಬ ಜಂಕ್ಷನ್ ಹಾಗೂ ಬಿ.ಸಿ. ರೋಡು ಮೇಲ್ಸೇತುವೆ ಬಳಿಯಲ್ಲಿ ಪ್ರದರ್ಶಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬ ಮತದಾರರ ಹಕ್ಕು, ಗೌರವ, ಜವಬ್ದಾರಿ ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಕಾಂಬಳೆ ಹೇಳಿದ್ದಾರೆ.

ತಾಲೂಕು ಪಂಚಾಯಿತಿ ಬಂಟ್ವಾಳ, ತಾಲೂಕು ಸ್ವೀಪ್ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮತದಾರರ ಸಾಕ್ಷರತಾ ಸಂಘ ಕಾರ್ಮೆಲ್ ಪದವಿ ಕಾಲೇಜು ಮೊಡಂಕಾಪು ಇದರ ಸಹಭಾಗಿತ್ವದಲ್ಲಿ ಶನಿವಾರ ಬಿ.ಸಿ. ರೋಡಿನಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಥಾವು ಕೈಕಂಬ ದ್ವಾರದಿಂದ ಬಿ.ಸಿ.ರೋಡ್ ಬಸ್‌ನಿಲ್ದಾಣದವರೆಗೆ ನಡೆಯಿತು. ಇದೇ ಸಂದರ್ಭದಲ್ಲಿ ರಂಗನಿರ್ದೇಶಕ ಮೌನೇಶ್ ವಿಶ್ವಕರ್ಮ ನಿರ್ದೇಶನದಲ್ಲಿ ಕಾರ್ಮೆಲ್ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳು ‘ಮತ ಮಾರಾಟಕ್ಕಲ್ಲ’ ಎನ್ನುವ ಜಾಗೃತಿ ಬೀದಿನಾಟಕವನ್ನು ಕೈಕಂಬ ಜಂಕ್ಷನ್ ಹಾಗೂ ಬಿ.ಸಿ. ರೋಡು ಮೇಲ್ಸೇತುವೆ ಬಳಿಯಲ್ಲಿ ಪ್ರದರ್ಶಿಸಿದರು.

ಪುರಸಭೆ ಮುಖ್ಯಾಧಿಕಾರಿ ಶ್ರೀಧರ್‌.ವಿ, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರಕಾಶ್, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಶಿಶುಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಝ್, ಸ್ವೀಪ್ ಸಮಿತಿ ಜಿಲ್ಲಾ ತರಬೇತುದಾರ ವಿಠಲ್ ನಾಯಕ್, ನಿಕಟಪೂರ್ವ ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಶಾಂಭವಿ, ಪುರಸಭಾ ಆರೋಗ್ಯಾಧಿಕಾರಿ ರತ್ನಪ್ರಸಾದ್. ಕಾರ್ಮೆಲ್ ಕಾಲೇಜು ಪ್ರಾಂಶುಪಾಲೆ ಡಾ.ಸಿ. ಲತಾ ಫರ್ನಾಂಡಿಸ್‌, ಉಪನ್ಯಾಸಕಿ ವಿಜೇತ, ಸ್ವೀಪ್ ಸಮಿತಿ ಸದಸ್ಯರಾದ ಚಂದ್ರಶೇಖರ್ ಪಾತೂರು, ಪ್ರಶಾಂತ್, ಪ್ರದೀಪ್ ಕಾಮತ್, ರಾಜೇಶ್, ಮಂಗಳೂರಿನ ಶಕ್ತಿ ರೆಸಿಡೆನ್ಸಿ ಶಾಲೆಯ ಶಿಕ್ಷಕರು, ತಾಲೂಕು ಪಂಚಾಯಿತಿ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಸಿಬ್ಬಂದಿ, ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಮೊದಲಾದವರು ಹಾಜರಿದ್ದರು. ತಾಲೂಕು ಸ್ವೀಪ್ ತರಬೇತುದಾರೆ ಸುರೇಖಾ‌ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ತಾಪಂ ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ